ಡೈಲಿ ವಾರ್ತೆ: 15/ಜುಲೈ /2024

ಉಡುಪಿ ಜಿಲ್ಲೆಯಲ್ಲಿ ಮಳೆಯ ಆರ್ಭಟ – ಶಾಲೆಗಳಿಗೆ ರಜೆ ನೀಡುವಂತೆ ಪೋಷಕರ ಒತ್ತಾಯ!

ಉಡುಪಿ: ಕರಾವಳಿ ಜಿಲ್ಲೆಯಲ್ಲಿ ನಿನ್ನೆಯಿಂದ ನಿರಂತರ ಭಾರೀ ಗಾಳಿ ಮಳೆ ಸುರಿಯುತ್ತಿದ್ದು ಶಾಲೆಗೆ ರಜೆ ನೀಡುವಂತೆ ಪೋಷಕರು ಜಿಲ್ಲಾಡಳಿತವನ್ನು ಒತ್ತಾಯ ಮಾಡಿದ್ದಾರೆ.

ಹಲವು ತಗ್ಗು ಪ್ರದೇಶಗಳಲ್ಲಿ ನೆರೆ ಪರಿಸ್ಥಿತಿ ಉಂಟಾಗಿದ್ದು, ಶಾಲಾ ಮಕ್ಕಳು ಜೀವ ಕೈಯಲ್ಲಿ ಹಿಡಿದು ಶಾಲೆಗಳಿಗೆ ಹೋಗಬೇಕಾದ ಪರಿಸ್ಥಿತಿ ಇದ್ದರೂ ಜಿಲ್ಲಾಡಳಿತ ಇನ್ನೂ ರಜೆ ಘೋಷಣೆ ಮಾಡದೆ ಇರುವುದಕ್ಕೆ ಪೋಷಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.