ಡೈಲಿ ವಾರ್ತೆ: 15/ಜುಲೈ /2024

ಉತ್ತರ ಕನ್ನಡ: ಜಿಲ್ಲಾಧ್ಯಂತ ಧಾರಾಕಾರ ಮಳೆ – (ನಾಳೆ) ಜು.16 ರಂದು ಶಾಲೆ, ಕಾಲೇಜ್ ಗೆ ರಜೆ ಘೋಷಣೆ

ಕಾರವಾರ : ಜಿಲ್ಲಾಧ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಜುಲೈ.16ರಂದು ಉತ್ತರಕನ್ನಡ ಜಿಲ್ಲೆಯ ಕಾರವಾರ,ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ಶಿರಸಿ, ಸಿದ್ದಾಪುರ, ಯಲ್ಲಾಪುರ, ದಾಂಡೇಲಿ ಶಾಲಾ-ಕಾಲೇಜು, ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಉತ್ತರಕನ್ನಡ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರೀಯಾ ಆದೇಶ ಹೊರಡಿಸಿದ್ದಾರೆ.