ಡೈಲಿ ವಾರ್ತೆ: 15/ಜುಲೈ /2024

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿ ಬಿದ್ದ ಖಾಸಗಿ ಬಸ್ – ಪ್ರಯಾಣಿಕರು ಪಾರು!

ಬಂಟ್ವಾಳ : ಬಿ.ಸಿ.ರೋಡು – ಸರಪಾಡಿ ಮಧ್ಯೆ ಸಂಚರಿಸುವ ಖಾಸಗಿ ಬಸ್ಸು ಅಜಿಲಮೊಗರು- ಸರಪಾಡಿ ರಸ್ತೆಯ ಮಣಿನಾಲ್ಕೂರು ಗ್ರಾಮದ ಕೊಟ್ಟುಂಜ ಎಂಬಲ್ಲಿ ಪಲ್ಟಿಯಾದ ಘಟನೆ ಸೋಮವಾರ ನಡೆದಿದೆ.

ಬಸ್ಸು ಸಂಪೂರ್ಣವಾಗಿ ಗದ್ದೆಗೆ ಪಲ್ಟಿಯಾಗಿದ್ದು, ಪ್ರಯಾಣಿಕರು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ. ಈ ಬಸ್ಸಿನಲ್ಲಿ ಕೇವಲ 8 ಮಂದಿ ಪ್ರಯಾಣಿಕರಿದ್ದು,  ವಿಪರೀತ ಮಳೆಯಿಂದಾಗಿ ಗದ್ದೆಯಲ್ಲಿ ನೀರು ತುಂಬಿಕೊಂಡಿತ್ತು. ಕೆಲವು ಪ್ರಯಾಣಿಕರು ಕೆಸರಿನಲ್ಲಿ ಮುಳುಗಿದ್ದರು  ಎನ್ನಲಾಗಿದೆ.