ತೀರ್ಥಹಳ್ಳಿ-ಕುಂದಾಪುರ ರಸ್ತೆಗೆ ಉರುಳಿ ಬಿದ್ದ ಬೃಹತ್ ಮರ – ಸಂಚಾರ ಅಸ್ತವ್ಯಸ್ತ

ತೀರ್ಥಹಳ್ಳಿ: ಶಿವಮೊಗ್ಗ ಜಿಲ್ಲೆಯ‌ ಮಲೆನಾಡು ಭಾಗದಲ್ಲಿ ಗಾಳಿ ಮಳೆಯ ಅಬ್ಬರಕ್ಕೆ ಹೊಸನಗರ ತಾಲೂಕಿನ ಹಳಗುಂದ ಗ್ರಾಮದಲ್ಲಿ ಗಾಳಿ ಮಳೆಯಿಂದ ಬೃಹತ್ ಮರವೊಂದು ಅಡ್ಡಲಾಗಿ ಬಿದ್ದು ಕೆಲ ಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು.

ಪರಿಣಾಮ ತೀರ್ಥಹಳ್ಳಿ ಮಾಸ್ತಿಕಟ್ಟೆ ಕುಂದಾಪುರ ರಸ್ತೆ ಕೆಲಕಾಲ ಸ್ಥಗಿತಗೊಂಡು ಮಂಗಳೂರು, ಉಡುಪಿ, ಕುಂದಾಪುರ ಮಣಿಪಾಲ ತೆರಳಲು ವಾಹನ ಸವಾರರು ಪರದಾಡುವಂತಾಯಿತು.

ಮುಂಜಾನೆ ನಾಲ್ಕು ಗಂಟೆಗಳ ವೇಳೆಗೆ ಮರ ಬಿದ್ದಿದ್ದು ಈ ಮಾರ್ಗದಲ್ಲಿ ಬರುವ ವಾಹನಗಳು ನಿಂತಲ್ಲೇ ನಿಂತಿದ್ದು ಬಳಿಕ ಅರಣ್ಯ ಇಲಾಖೆಯ ಸಿಬಂದಿಗಳು ಮರ ತೆರವು ಕಾರ್ಯ ನಡೆಸಿದರು.