ಡೈಲಿ ವಾರ್ತೆ: 16/ಜುಲೈ /2024

ವಿಮೆನ್ ಇಂಡಿಯಾ ಮೂವ್ಮೆಂಟ್ ಪುತ್ತೂರೂ ವಿಧಾನ ಸಭಾ ಕ್ಷೇತ್ರ ಸಮಿತಿ ವತಿಯಿಂದ ಸದಸ್ಯತ್ವ ಅಭಿಯಾನ ಕಾರ್ಯಕ್ರಮ

ಪುತ್ತೂರು: ಜುಲೈ 15 ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ “ಘನತೆಯ ಸಮಾಜಕ್ಕೆ ಒಂದಾಗೋಣ” ಎಂಬ ಘೋಷ ವಾಕ್ಯ ದೊಂದಿಗೆ ಸದಸ್ಯತ್ವ ಅಭಿಯಾನ ಕಾರ್ಯಕ್ರಮವು ವಿಮೆನ್ ಇಂಡಿಯಾ ಮೂವ್ಮೆಂಟ್ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷರಾದ ಝಾಹಿದಾ ಸಾಗರ್ ರವರ ನೇತೃತ್ವದಲ್ಲಿ ದರ್ಬೆ ಈಶ್ವರ ಭಟ್ ಸಿಡ್ಕೋ ಸಭಾಂಗಣದಲ್ಲಿ ನಡೆಯಿತು

ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ಮಾತಾಡಿದ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಝಾಹಿದಾ ಸಾಗರ್ ಮಹಿಳೆ ಮಾನವ ಕುಲದ ಮುಖ್ಯ ಭಾಗವಾಗಿದ್ದು, ನಮ್ಮ ದೇಶದ ಸಾಂಸ್ಕೃತಿಕ ಮತ್ತು ಸಾಮಾಜಿಕ ಬೆಳವಣಿಗೆಯಲ್ಲಿ ಮಹಿಳೆಯರ ಪಾತ್ರ ಅತ್ಯಂತ ಮಹತ್ವದ್ದಾಗಿದೆ, ಆದ್ದರಿಂದ ಭಾರತಿಯ ಸಂವಿಧಾನ ಮಹಿಳೆಯರ ಹಕ್ಕುಗಳು ಮತ್ತು ಸುರಕ್ಷತೆಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಿದೆ ಹಾಗೂ
ದೇಶಕ್ಕೆ ಸ್ವಾತಂತ್ರ ಸಿಕ್ಕಿ ವರುಷ ಕಳೆದು ಅನೇಕ ಸಾಧನೆಗಳು ಪ್ರಗತಿಗಳು ನಡೆದರೂ ಮಹಿಳೆಯರ ವಿಚಾರದಲ್ಲಿ ಸಂವಿಧಾನ ನೀಡಿರುವ ಹಕ್ಕುಗಳನ್ನು ಸಂಪೂರ್ಣವಾಗಿ ಪಡೆಯಲು ಸಾಧ್ಯವಾಗಿಲ್ಲ. ಮಹಿಳೆಯರ ಮೇಲಿನ ದೌರ್ಜನ್ಯ ಮತ್ತು ಹಕ್ಕುಗಳನ್ನು ಕಸಿಯುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.

  ಮುಖ್ಯ ಅತಿಥಿಯಾಗಿ ಆಗಮಿಸಿದ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾದ ರಾಷ್ಟ್ರೀಯ ಕಾರ್ಯದರ್ಶಿ ರಿಯಾಜ್ ಪರಂಗಿಪೇಟೆ ಯವರು ಮಾತಾಡಿ ಪ್ರಸಕ್ತ ಭಾರತದ ರಾಜಕೀಯ ಸನ್ನಿವೇಶ ಮತ್ತು ರಾಜಕೀಯದಲ್ಲಿ ಮಹಿಳೆಯರ ಪಾತ್ರ ಎಂಬ ವಿಷಯದಲ್ಲಿ ವಿಷಯ ಮಂಡಿಸಿದರು.

ವಿಮೆನ್ ಇಂಡಿಯಾ ಮೂವ್ಮೆಂಟ್ ದ.ಕ ಜಿಲ್ಲಾಧ್ಯಕ್ಷರಾದ ನೌರಿನ್ ಆಲಂಪಾಡಿಯವರು ಅತಿಥಿ ಭಾಷಣದಲ್ಲಿ ಸಮಾಜದಲ್ಲಿ ಮಹಿಳೆಯರ ಜವಾಬ್ದಾರಿಗಳು, ತಾರತಮ್ಯ ನೀತಿ ಮತ್ತು ಸಾಮಾಜಿಕ ಪಿಡುಗುಗಳ ಬಗ್ಗೆ ಅರ್ಥೈಸಿ ಮಹಿಳಾ ಸಾಧಕೀಯರ ಬಗ್ಗೆ ವಿವರಿಸುತ್ತಾ , ಘನತೆಯಿಂದ ಬದುಕಲು ಮಹಿಳಾ ಸಂಘಟಿತನದ ಅಗತ್ಯವಿದೆ ಎಂದು ಕರೆ ನೀಡಿದರು.
ಈ ಕಾರ್ಯಕ್ರಮದಲ್ಲಿ ವಿಮೆನ್ ಇಂಡಿಯಾ ಮೂವ್ಮೆಂಟ್ ಇದರ ಸದಸ್ಯತ್ವದ ಅಭಿಯಾನದ ಕರಪತ್ರವನ್ನು ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾದ ಪುತ್ತೂರು ವಿಧಾನಸಭಾ ಅಧ್ಯಕ್ಷರಾದ ಹಾಜಿ ಇಬ್ರಾಹಿಂ ಸಾಗರ್ ಬಿಡುಗಡೆ ಮಾಡಿದರು.
ವಿಮೆನ್ ಇಂಡಿಯಾ ಮೂವ್ಮೆಂಟ್ ಇದರ ಧ್ವಜವನ್ನು ಜಿಲ್ಲಾದ್ಯಕ್ಷರಾದ ನೌರಿನ್ ಆಲಂಪಾಡಿ ಯವರು ವಿಮೆನ್ ಇಂಡಿಯಾ ಪುತ್ತೂರು ವಿಧಾನಸಭಾ ಕ್ಷೇತ್ರ ಅಧ್ಯಕ್ಷರಾದ ಜಾಹಿದಾ ಸಾಗರ್ ಅವರಿಗೆ ಹಸ್ತಾಂತರಿಸುವ ಮೂಲಕ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದರು.

ಇದೇ ಕಾರ್ಯಕ್ರಮದಲ್ಲಿ ಸರಕಾರಿ ಮೆಡಿಕಲ್ ಕಾಲೇಜಿಗಾಗಿ ಕರಪತ್ರ ಹಿಡಿಯುವ ಮೂಲಕ ಬೆಂಬಲವನ್ನು ಸೂಚಿಸಲಾಯಿತು
ಈ ಸಂದರ್ಭ ಸುಮಾರು 25 ಮಹಿಳೆಯರು ವಿಮ್ ಸದಸ್ಯತ್ವ ಸ್ವೀಕರಿಸಿದರು.
ಕಾರ್ಯಕ್ರಮದಲ್ಲಿ ಜೊತೆ ಕಾರ್ಯದರ್ಶಿ ಫಾತಿಮಾ ನಿರ್ಮ, ಕೋಶಾಧಿಕಾರಿ ಫಾಹೀನ ಸದಸ್ಯರುಗಳಾದ ಉಪ್ಪಿನಂಗಡಿ ಪಂಚಾಯತ್ ಸದಸ್ಯೆ ನಫೀಸ ಮಠ. ಇಲಂತಿಲ ಗ್ರಾಮ ಪಂಚಾಯತ್ ಸದಸ್ಯೆ ನುಶ್ರತ್ ಹಾಗೂ ನಗರ ಸಭೆ ಸದಸ್ಯೆಯಾದ ಝುರ ಬನ್ನೂರು ಉಪಸ್ಥಿತರಿದ್ದರು.
ಕಾರ್ಯಕ್ರಮದ ನಿರೂಪಣೆಯನ್ನು ಆಫಿಝ ರಫೀಕ್ ಸಾಗರ್ ರವರು ನಿರ್ವಹಿಸಿದರು ಹಾಗೂ ಸ್ವಾಗತವನ್ನು ಸೌದ ಮಠ ಮತ್ತು ಉಪಾಧ್ಯಕ್ಷೆ ಝರೀನಾ ವಂದಿಸಿದರು.