ಡೈಲಿ ವಾರ್ತೆ: 25/ಜುಲೈ /2024

ಉಡುಪಿ:ಬಾರಿ ಗಾಳಿಮಳೆ ಹಿನ್ನೆಲೆ ಜಿಲ್ಲೆಯ ಕುಂದಾಪುರ ಬೈಂದೂರು ಕಾರ್ಕಳ ಹೆಬ್ರಿಯಲ್ಲಿ ಶಾಲೆಗಳಿಗೆ ರಜೆ ಘೋಷಣೆ

ಉಡುಪಿ: ಭಾರೀ ಗಾಳಿ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯ ಕುಂದಾಪುರ, ಬೈಂದೂರು, ಹೆಬ್ರಿ ಹಾಗೂ ಕಾರ್ಕಳ ತಾಲೂಕುಗಳ ವ್ಯಾಪ್ತಿಯಲ್ಲಿ ಅಂಗನವಾಡಿ ಪ್ರಾಥಮಿಕ ಪಾಠಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ( ಜು.25) ಇಂದು ಗುರುವಾರ ರಜೆಯನ್ನು ಆಯಾ ತಾಲೂಕುಗಳ ತಹಶೀಲ್ದಾರ್ ಗಳು ಘೋಷಣೆ ಮಾಡಿದ್ದಾರೆ.