ಡೈಲಿ ವಾರ್ತೆ: 27/ಜುಲೈ /2024

ತೆಕ್ಕಟ್ಟೆ: ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ ಚರಂಡಿಗೆ ಬಿದ್ದ ಆಟೋ ರಿಕ್ಷಾ!

ತೆಕ್ಕಟ್ಟೆ: ಚಾಲಕನ ನಿಯಂತ್ರಣ ತಪ್ಪಿ ಆಟೋ ರಿಕ್ಷಾಯೊಂದು ರಸ್ತೆಯಿಂದ ಚರಂಡಿಗೆ ಬಿದ್ದ ಘಟನೆ ಶನಿವಾರ ಸಂಜೆ ಉಳ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಮೀಪ ನಡೆದಿದೆ.

ಕೆದೂರುನಿಂದ ತೆಕ್ಕಟ್ಟೆ ಕಡೆಗೆ ಬರುತ್ತಿದ್ದ ಆಟೋ ರಿಕ್ಷಾವು ಚಾಲಕನ ನಿಯಂತ್ರಣ ತಪ್ಪಿ ಒಮ್ಮೆಲೆ ರಸ್ತೆಯಿಂದ ಚರಂಡಿಗೆ ಬಿದ್ದು ಪಲ್ಟಿಯಾಗಿದೆ.

ಆಟೋ ರಿಕ್ಷಾದಲ್ಲಿ ಚಾಲಕನೊರ್ವ ಮಾತ್ರ ಇದ್ದರಿಂದ ಹೆಚ್ಚಿನ ಅನಾಹುತ ತಪ್ಪಿದೆ. ಅಲ್ಲದೆ ಅದೃಷ್ಟವಶಾತ್‌ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಿಕ್ಷಾ ಜಖಂ ಗೊಂಡಿದೆ.