ಡೈಲಿ ವಾರ್ತೆ: 31/ಜುಲೈ /2024

ಉಡುಪಿ ಜಿಲ್ಲೆಯಲ್ಲಿ ಧಾರಾಕಾರ ಮಳೆ ಹಿನ್ನಲೆ ನಾಲ್ಕು ತಾಲೂಕಿನ ಎಲ್ಲಾ ಶಾಲಾ ಕಾಲೇಜ್‌ಗೆ ಇಂದು (ಜು.31) ರಜೆ ಘೋಷಣೆ

ಉಡುಪಿ: ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿದಿದ್ದು, ಮುಂಜಾಗ್ರತಾ ಕ್ರಮವಾಗಿ ಕಾಪು, ಹೆಬ್ರಿ, ಕಾರ್ಕಳ ಮತ್ತು ಉಡುಪಿ ತಾಲೂಕು ವ್ಯಾಪ್ತಿಯಲ್ಲಿ ಅಂಗನವಾಡಿ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ದಿನಾಂಕ 31.07.2024 ರಂದು ರಜೆಯನ್ನು ತಾಲ್ಲೂಕಿನ ತಹಸಿಲ್ದಾರ್ ಘೋಷಣೆ ಮಾಡಿದ್ದಾರೆ.

ಮಕ್ಕಳ ಸುರಕ್ಷತೆ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳಿಗೆ ತಹಸೀಲ್ದಾರ್ ರಜೆ ಘೋಷಿಸಿದ್ದು, ಈ ದಿನವನ್ನು ಶನಿವಾರ ಪೂರ್ಣ ದಿನ /ಭಾನುವಾರ ತರಗತಿಗಳನ್ನು ಮಾಡಿ ಸರಿದೂಗಿಸಿಕೊಳ್ಳುವಂತೆ ಆದೇಶಿಸಲಾಗಿದೆ.