ಡೈಲಿ ವಾರ್ತೆ: 02/ಆಗಸ್ಟ್/2024

ಸುಬ್ರಹ್ಮಣ್ಯ ಪೂಜಾರಿ ಯಡ್ತರೆಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ

ಬೈಂದೂರು ಯಡ್ತರೆಯ ಯುವ ನಾಯಕ ಸುಬ್ರಹ್ಮಣ್ಯ ಪೂಜಾರಿ ಇವರ ಸಮಾಜ ಸೇವೆ , ಕನ್ನಡ , ನೆಲೆ,ಜಲ, ಭಾಷೆ, ಸಂಗೀತ, ಸಾಂಸ್ಕೃತಿಕ ಕ್ಷೇತ್ರದಲ್ಲಿ ಮಾಡಿರುವ ವಿಶೇಷ ಸೇವೆಯನ್ನು ಗುರುತಿಸಿ “ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮೈಸೂರು,” “ಸುವರ್ಣ ಕರ್ನಾಟಕ ಕಾರ್ಮಿಕ ವೇದಿಕೆ (ರಿ)” ಇವರು ಕೊಡಲ್ಪಡುವ 2024 ನೇ ಸಾಲಿನ “ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಪುರಸ್ಕ್ರತರಾಗಿದ್ದಾರೆ.


ಮೈಸೂರಿನಲ್ಲಿ ನಡೆದ ಪ್ರಶಸ್ತಿ ಸಮಾರಂಭದಲ್ಲಿ ಮೈಸೂರು ಕೊಡಗು ಸಂಸದರಾದ ಶ್ರೀ ಯದುವೀರ್ ಮಹಾರಾಜರು ಪ್ರಶಸ್ತಿಯನ್ನು ನೀಡಿ ಗೌರವಿಸಿದರು.


ಅತೀ ಚಿಕ್ಕ ವಯಸ್ಸಿನಲ್ಲೇ ಕರಾಟೆಯಲ್ಲಿ ಬ್ಲ್ಯಾಕ್ ಬೆಲ್ಟ್ ಪಡೆಯುವ ಮೂಲಕ ಸಾವಿರಾರು ಯುವಕರಿಗೆ ಕರಾಟೆ ತರಬೇತಿ ನೀಡಿರುವ ಇವರು, ಬೈಂದೂರು ತಾಲೂಕು ರಚನೆಗೆ ಒತ್ತಾಯಿಸಿ ತಾಲೂಕು ಹೋರಾಟ ಸಮಿತಿಯ ಸ್ಥಾಪನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಸಾಮಾಜಿಕ, ಧಾರ್ಮಿಕ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿ,ಬೈಂದೂರು ಕಾಂಗ್ರೆಸ್ ಪಕ್ಷದ ಯುವ ಕಾಂಗ್ರೆಸ್ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.