ಡೈಲಿ ವಾರ್ತೆ: 02/ಆಗಸ್ಟ್/2024

ಉತ್ತರಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆ: ನಾಳೆ (ಆ. 3) ರಂದು ಶಾಲೆ, ಕಾಲೇಜಿಗೆ ರಜೆ ಘೋಷಣೆ

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ, ವ್ಯಾಪಕ ಮಳೆ ಸುರಿಯುತ್ತಿರುವುದರಿಂದ, ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಅಗಷ್ 03 (ಶನಿವಾರ) ರಂದು ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಜೋಯಿಡಾ, ದಾಂಡೇಲಿ, ಶಿರಸಿ, ಸಿದ್ದಾಪುರ ತಾಲೂಕಿನ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ತಿಳಿಸಿದ್ದಾರೆ.