ಡೈಲಿ ವಾರ್ತೆ: 02/ಆಗಸ್ಟ್/2024

ರಾಷ್ಟ್ರ ಮಟ್ಟದ ಚಿಣ್ಣರ ಚಿತ್ರ ಚಿತ್ತಾರ ಪ್ರತಿಭಾ ಪ್ರದರ್ಶನ ಸ್ಪರ್ಧೆಯಲ್ಲಿ ಜಯಗಳಿಸಿದ ಕುಮಾರಿ ಸವಿತಾ ಹಿರೇಮಠ

ಇತ್ತೀಚಿಗೆ ನಡೆದ ರಾಷ್ಟ್ರ ಮಟ್ಟದ ಚಿಣ್ಣರ ಚಿತ್ರ ಚಿತ್ತಾರ ಸ್ಪರ್ಧೆಯಲ್ಲಿ ಸರಕಾರಿ ಪ್ರೌಢ ಶಾಲೆ ಬಟ್ಟೂರನ ವಿದ್ಯಾರ್ಥಿನಿ ಕುಮಾರಿ ಸವಿತಾ ಹಿರೇಮಠ ಇವಳು ಅತ್ಯಮೋಘ ಪ್ರದರ್ಶನ ನೀಡಿ ಆಯ್ಕೆಯಾಗಿದ್ದಾಳೆ.

17 ಆಗಸ್ಟ್ 2024 ರಂದು ಧಾರವಾಡದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮಾನ್ಯ ಮುಖ್ಯಮಂತ್ರಿಗಳಿಂದ ಪ್ರತಿಭಾ ಪುರಸ್ಕಾರ ಹಾಗೂ ನಗದು ಬಹುಮಾನ ಪಡೆಯಲಿದ್ದಾಳೆ.

ಸಾಧನೆಗೈದ ವಿದ್ಯಾರ್ಥಿನಿಗೆ ವಿಶೇಷ ಸಾಧನೆಗೆ ಕಾರಣರಾದ ಚಿತ್ರಕಲಾ ಶಿಕ್ಷಕರಾದ ಶ್ರೀ ಡಿ ಸಿ ಪತ್ತಾರ್ ಗುರುಗಳಿಗೆ ಗ್ರಾಮಸ್ಥರು ಹಾಗೂ ಚುನಾಯಿತ ಪ್ರತಿನಿಧಿಗಳು ಮತ್ತು ಎಸ್ ಡಿ ಎಂ ಸಿ ಸರ್ವ ಸದಸ್ಯರು ಶಾಲಾ ಶಿಕ್ಷಕರು ಸಂತಸ ವ್ಯಕ್ತ ಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.