ಡೈಲಿ ವಾರ್ತೆ: 03/ಆಗಸ್ಟ್/2024

ಕೋಟ: ನಾಯಿ ಉಳಿಸಲು ಹೋಗಿ ಅವಘಡ: ಉಪ್ಲಾಡಿ ಸೇತುವೆಯಿಂದ ಕೆಳಗೆ ಬಿದ್ದ ಕಾರು, ಚಾಲಕ ಪಾರು!

ಕೋಟ: ಅಡ್ಡ ಬಂದ ನಾಯಿಯನ್ನು ಉಳಿಸಲು ಹೋಗಿ ಕಾರು ಚಾಲಕನ ನಿಯಂತ್ರಣ ತಪ್ಪಿ ಉಪ್ಲಾಡಿ ಸೇತುವೆಯಿಂದ ಕೆಳಗೆ ಬಿದ್ದ ಘಟನೆ ಆ. 3 ರಂದು ಶನಿವಾರ ಬೆಳಿಗ್ಗೆ ಬ್ರಹ್ಮಾವರ ತಾಲೂಕಿನ ಕೋಟ ಮೂರು ಕೈ ಸಮೀಪ ಉಪ್ಲಾಡಿ ಸೇತುವೆ ಬಳಿ ನಡೆದಿದೆ.

ಚಾಲಕನೋರ್ವ ಆಲ್ಟೊ ಕಾರುನ್ನು ಚಲಾಯಿಸಿಕೊಂಡು ಕೋಟ ಮೂರುಕೈ ಯಿಂದ ಮಧುವನ ಕಡೆಗೆ ಹೋಗುತ್ತಿದ್ದಾಗ ಉಪ್ಲಾಡಿ ಸೇತುವೆ ಸಮೀಪ ದಾರಿಗೆ ಅಡ್ಡ ಬಂದ ನಾಯಿ ಜೀವ ಉಳಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಉಪ್ಲಾಡಿ ಸೇತುವೆ ಕೆಳಗೆ ಬಿದ್ದಿದೆ.
ಸೇತುವೆಯಿಂದ ಕೆಳಗೆ ಬಿದ್ದ ಕಾರು ಅದೃಷ್ಟವಶಾತ್ ಮರವೊಂದಕ್ಕೆ ಸಿಕ್ಕಿಕೊಂಡಿದ್ದರಿಂದ ಹೊಳೆಯ ನೀರಿನಿಂದ ಕೂದಲೇಳೆ ಅಂತರದಲ್ಲಿ ಪಾರಾಗಿ ದೊಡ್ಡ ದುರಂತವೊಂದು ತಪ್ಪಿದೆ.

ಕಾರಿನಲ್ಲಿ ಚಾಲಕನೊರ್ವ ಮಾತ್ರ ಇದ್ದಿದ್ದು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಪಾಯದಿಂದ ಪಾರಾಗಿದ್ದಾರೆ.
ಚಾಲಕ ಮಧುವನ ಅಬ್ದುಲ್ ರಜಾಕ್ ನನ್ನು ಸ್ಥಳೀಯರು ತಕ್ಷಣ ರಕ್ಷಿಸಿದ್ದಾರೆ.
ಕಾರನ್ನು ಕ್ರೇನ್ ಮೂಲಕ ಮೇಲೆತ್ತಲಾಯಿತು.