ಡೈಲಿ ವಾರ್ತೆ: 04/ಆಗಸ್ಟ್/2024

ಕುಂದಾಪುರ: ಭಾರಿ ಗಾಳಿ ಮಳೆಗೆ ಮನೆಗೆ ಹಾನಿ – ಸ್ಥಳಕ್ಕೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಭೇಟಿ

ಕುಂದಾಪುರ: ಕುಂದಾಪುರ ವಿಧಾನಸಭಾ ಕ್ಷೇತ್ರದ ಯಡ್ತಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಲ್ತಾರು ಶಂಕರ್ ಮರಕಾಲ ಅವರ ಮನೆಗೆ ಭಾರಿ ಗಾಳಿ ಮಳೆಗೆ ಮನೆ ಸಂಪೂರ್ಣ ಹಾನಿಯಾಗಿ ಸಾಕಷ್ಟು ನಷ್ಟ ಸಂಭವಿಸಿದ್ದು ಇಂದು ಸ್ಥಳಕ್ಕೆ ಕುಂದಾಪುರ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ತುರ್ತಾಗಿ ಪರಿಹಾರ ಬಿಡುಗಡೆ ಮಾಡುವಂತೆ ತಿಳಿಸಿದರು.

ಈ ಸಂದರ್ಭದಲ್ಲಿ
ಯಡ್ತಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಕಾಶ್ ಶೆಟ್ಟಿ ಸದಸ್ಯರಾದ ಗೌತಮ್ ಹೆಗ್ಡೆಸಚಿನ್ ಹಾಗೂ ಗ್ರಾಮಸ್ಥರು ಅಧಿಕಾರಿಗಳು ಉಪಸಿದ್ಧರಿದ್ದರು.