ಡೈಲಿ ವಾರ್ತೆ: 06/ಆಗಸ್ಟ್/2024

ಮೈಸೂರು ಚಲೋ ಪಾದಯಾತ್ರೆಯಲ್ಲಿ ಕುಂದಾಪುರ ಶಾಸಕ ಕಿರಣ್ ಕೊಡ್ಗಿ ಭಾಗಿ

ಕುಂದಾಪುರ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ಮೈಸೂರು ಚಲೋ ಪಾದಯಾತ್ರೆಯಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿಯವರು ಭಾಗಿಯಾಗಿ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕುತ್ತ ಬಿಜೆಪಿ ಜೆಡಿಎಸ್ ಪಕ್ಷಗಳ ಜನಪರ ಹೋರಾಟ 4ನೇ ದಿನವೂ ಪಾದಯಾತ್ರೆಯು ಬಿರುಗಾಳಿ ಸ್ವರೂಪ ಪಡೆದುಕೊಂಡಿದೆ.

ಮೈಸೂರು ಚಲೋ ಪಾದಯಾತ್ರೆಯಲ್ಲಿ ಕಾರ್ಯಕರ್ತರು ಉತ್ಸಾಹದಿಂದ ಹಾಕುವ ಒಂದೊಂದು ಹೆಜ್ಜೆಯೂ ಬದಲಾವಣೆಗೆ ನಾಂದಿ ಹಾಡುವುದು ಗ್ಯಾರಂಟಿ ಎಂದರು. ಅಲ್ಲದೆ 5ನೇ ದಿನವಾದ ನಾಳೆ ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಿಂದ ಸಹಸ್ರಾರು ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಮಂಡ್ಯದ ರಾಮನಗರದಿಂದ ಭ್ರಷ್ಟ ರಾಜ್ಯ ಕಾಂಗ್ರೆಸ್ ಸರ್ಕಾರದ ಹಗರಣಗಳ ವಿರುದ್ಧ ಪಾದಯಾತ್ರೆಗಳ ಮೂಲಕ
4ನೇ ದಿವಸದ ಪಾದಯಾತ್ರೆಯಲ್ಲಿ ಭಾಗವಹಿಸಿದ್ದು ಇವರ, ಜೊತೆ ಜೊತೆಗೆ ಕುಂದಾಪುರ ಮಂಡಲ ಬಿಜೆಪಿ ಅಧ್ಯಕ್ಷರಾದ
ಸುರೇಶ್ ಶೆಟ್ಟಿ ಗೋಪಾಡಿ, ಜಿಲ್ಲಾ ಯುವ ಮೋರ್ಚಾದ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ಕುಂದಾಪುರ ಬಿಜೆಪಿ ಪಕ್ಷದ ಮುಖಂಡರಾದ ಸಂಪತ್ ಕುಮಾರ್ ಶೆಟ್ಟಿ ಕೆದೂರು, ರಾಜೇಶ್ ಉಡುಪ ಕೋಟೇಶ್ವರ ಹಾಗೂ ಇನ್ನಿತರರು ಪಾದಯಾತ್ರೆಯ ಮೂಲಕ ಹೆಜ್ಜೆ ಹಾಕಿದರು.