ಡೈಲಿ ವಾರ್ತೆ: 07/ಆಗಸ್ಟ್/2024

ಬಂಟ್ವಾಳ: ಚೂರಿ ಇರಿತ ಪ್ರಕರಣ – ಮೂವರ ಬಂಧನ, ಉಳಿದ ಆರೋಪಿಗಳಿಗಾಗಿ ಶೋಧ


ಬಂಟ್ವಾಳ : ವೈಯಕ್ತಿಕ ಕ್ಷುಲ್ಲಕ್ಕ ವಿಚಾರವಾಗಿ ಮಾತಿಗೆ ಮಾತು ಬೆಳೆದು ಚೂರಿಯಿಂದ ಇರಿದು ಪರಾರಿಯಾಗಿದ್ದ ಆರೋಪಿಗಳ ಪೈಕಿ ಮೂವರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬುಧವಾರ ಬಂಧಿಸಿದ್ದಾರೆ.

ಬಂಟ್ವಾಳ ನಿವಾಸಿಗಳಾದ ಅಶ್ವಥ್, ಶರಣ್ ಮತ್ತು ವಸಂತ ಎಂಬವರು ಬಂಧಿತ ಆರೋಪಿಗಳು.

ಘಟನೆಯ ವಿವರ:
ವೈಯಕ್ತಿಕ ಕ್ಷುಲ್ಲಕ ವಿಚಾರವಾಗಿ ಬಂಟ್ವಾಳ ಬೈಪಾಸ್ ಬಳಿ ಎರಡು ತಂಡಗಳ ನಡುವೆ ಪರಸ್ಪರ ಗಲಾಟೆ ನಡೆದಿದ್ದು ಒಂದು ತಂಡ ಪೃಥ್ವಿರಾಜ್ ಮತ್ತು ವಿನೀತ್ ಎಂಬವರಿಗೆ ಚೂರಿಯಿಂದ ಇರಿದು ಪರಾರಿಯಾಗಿತ್ತು. ಇರಿತದಿಂದ ಗಾಯಗೊಂಡ ಯುವಕರನ್ನು ಆರಂಭದಲ್ಲಿ ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮತ್ತೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದ್ದು, ಉಳಿದ ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರೆದಿದೆ.