ಡೈಲಿ ವಾರ್ತೆ: 07/ಆಗಸ್ಟ್/2024

ಮದ್ವೆಯಾದ ಕೆಲವೇ ಗಂಟೆಗಳಲ್ಲಿ ನವದಂಪತಿ ಹೊಡೆದಾಟ: ವಧು ದುರಂತ ಸಾವು, ವರನ ಸ್ಥಿತಿ ಗಂಭೀರ!

ಕೋಲಾರ: ಮದುವೆಯಾದ ಕೆಲವೇ ಗಂಟೆಗಳಲ್ಲಿ ನವದಂಪತಿ ಒಬ್ಬರಿಗೊಬ್ಬರು ಹೊಡೆದಾಡಿಕೊಂಡಿದ್ದು,, ಗಾಯಗೊಂಡಿದ್ದ ವಧು ಚಿಕಿತ್ಸೆ ಫಲಕಾರಿಯಾಗದೇ ವಧು ಮೃತಪಟ್ಟಿದ್ದರೆ, ವರನ ಸ್ಥಿತಿ ಗಂಭೀರವಾಗಿದೆ. ಈ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್​​ ತಾಲೂಕಿನ ಚಂಬರಸನಹಳ್ಳಿಯಲ್ಲಿ ನಡೆದಿದೆ.

ಮೃತಪಟ್ಟ ವಧು ಲಿಖಿತ ಶ್ರೀ ಎಂದು ತಿಳಿದುಬಂದಿದೆ.

ಲಿಖಿತ ಶ್ರೀ ಹಾಗೂ ನವೀನ್ (ಇಂದು) ಆ. 7 ರಂದು ಸಪ್ತಪದಿ ತುಳಿದರು. ಆದ್ರೆ, ಅದೇನಾಯ್ತೋ ಏನೋ ರೂಮ್​ಗೆ ಹೋಗಿ ಇಬ್ಬರೂ ಹೊಡೆದಾಡಿಕೊಂಡಿದ್ದಾರೆ. ಇದರಿಂದ ತೀವ್ರವಾಗಿ ಗಾಯಗೊಂಡಿದ್ದ ವಧು ಲಿಖಿತಶ್ರೀ ಸಾವನ್ನಪ್ಪಿದ್ದಾಳೆ.

ಕೋಲಾರ ಜಿಲ್ಲೆ ಕೆಜಿಎಫ್ ತಾಲ್ಲೂಕು ಚಂಬರಸನಹಳ್ಳಿ ಗ್ರಾಮದಲ್ಲಿ ಇಂದು(ಆಗಸ್ಟ್​ 07) ವಧು ಲಿಖಿತ ಶ್ರೀ ಹಾಗೂ ನವೀನ್ ಅದ್ಧೂರಿಯಾಗಿ ಮದುವೆ ಆಗಿದೆ. ಬಳಿಕ ರೂಮ್​​ಗೆ ತೆರಳಿದ ಜೋಡಿ ಅದೇನಾಯ್ತೋ ಏನೋ ಏಕಾಏಕಿ ಒಬ್ಬರಿಗೊಬ್ಬರು ಹೊಡೆದಾಡಿಕೊಂಡಿದ್ದಾರೆ. ಪರಿಣಾಮ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಇಬ್ಬರನ್ನು ಕೆಜಿಎಫ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದ್ರೆ, ದುರದೃಷ್ಟವಶಾತ್​ ವಧು ಲಿಖಿತಶ್ರೀ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಇನ್ನು ಗಂಭೀತವಾಗಿ ಗಾಯಗೊಂಡಿರುವ ವರ ನವೀನ್​ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಕೋಲಾರದ ಆಸ್ಪತ್ರೆಗೆ ರವಾನಿಸಲಾಗಿದೆ.

ಮದ್ವೆಯಾಗಿ ಇನ್ನೇನು ಸುಖವಾಗಿ ಸಂಸಾರ ಸಾಗಿಸಬೇಕಿದ್ದ ವಧು ದುರಂತ ಅಂತ್ಯಕಂಡಿದ್ದರೆ, ವರ ನವೀನ್ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸಿದ್ದಾನೆ. ಆದ್ರೆ, ಯಾವ ಕಾರಣಕ್ಕೆ ಜೀವ ಹೋಗುವಾಗೆ ಹೊಡೆದುಕೊಂಡರು ಎನ್ನುವುದು ತಿಳಿದುಬಂದಿಲ್ಲ. ಸದ್ಯ ವಿಷಯ ತಿಳಿದು ಸ್ಥಳಕ್ಕೆ ಅಂಡರ್ ಸನ್ ಪೇಟೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ಅದೇನೆ ಇರಲಿ ಗಲಾಟೆಗಳು ಇದ್ದರೆ ಅದಕ್ಕೆ ಪರಿಹಾರ ಕಂಡುಕೊಳ್ಳಬೇಕು. ಆದ್ರೆ, ಪ್ರಾಣ ಹೋಗುವಾಗೇ ಹೊಡೆದಾಡಿಕೊಂಡಿರುವುದು ವಿಪರ್ಯಾಸವೇ ಸರಿ. ಮದುವೆ ಸಂಭ್ರಮದಲ್ಲಿದ್ದ ಎರಡೂ ಕುಟುಂಬಗಳಲ್ಲಿ ಈ ದುರಂತದಿಂದಾಗಿ ಸೂತಕದ ಛಾಯೆ ಆವರಿಸಿದೆ.