ಡೈಲಿ ವಾರ್ತೆ: 08/ಆಗಸ್ಟ್/2024

ಶಿರ್ವ: ತೋಟದಲ್ಲಿ ಸೀಯಾಳ ಕೊಯ್ಯುವ ವೇಳೆ ವಿದ್ಯುತ್‌ ತಂತಿ ತಗುಲಿ ವ್ಯಕ್ತಿ ಸಾವು!

ಉಡುಪಿ : ತೋಟದಲ್ಲಿ ಸೀಯಾಳ ಕೊಯ್ಯುವ ವೇಳೆ ವಿದ್ಯುತ್‌ ತಂತಿ ತಗಲಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಇಲ್ಲಿನ ನಡೀಬೆಟ್ಟು ಎಂಬಲ್ಲಿ ಆ. 8ರ ಗುರುವಾರ ಬೆಳಿಗ್ಗೆ ಸಂಭವಿಸಿದೆ.

ಮೃತಪಟ್ಟ ವ್ಯಕ್ತಿ ಶಿರ್ವ ನಡೀಬೆಟ್ಟು ಪನಿಮಾರ್‌ ಮನೆಯ ಕೆಲಸದಾಳು ಸುರೇಶ್‌ ಶೆಟ್ಟಿ(68) ಎಂದು ಗುರುತಿಸಲಾಗಿದೆ.

ಮನೆಯ ಯಜಮಾನ ದೇವಸ್ಥಾನಕ್ಕೆ ಹೋಗಿದ್ದ ಸಂದರ್ಭ
ಮನೆಯಲ್ಲಿ ಯಾರೂ ಇಲ್ಲದ ವೇಳೆ ಸುರೇಶ್‌ ಕಬ್ಬಿಣದ ಸಲಕೆಯಿಂದ ಸೀಯಾಳ ತೆಗೆಯಲು ಹೋಗಿದ್ದು, ತೋಟದಲ್ಲಿರುವ ಹೈ ಟೆನ್ಷನ್‌ ವಯರ್‌ ತಗಲಿ ಈ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.