ಡೈಲಿ ವಾರ್ತೆ: 09/ಆಗಸ್ಟ್/2024

ಬೀಜಾಡಿ ಕ್ರಾಸ್ ಬಳಿ ನಿಂತ ಕಾರಿಗೆ ಟಿಪ್ಪರ್ ಡಿಕ್ಕಿ – ಕಾರು ಜಖಂ

ಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಲಾರಿಯೊಂದು ಹೆದ್ದಾರಿ ದಾಟಲು ಸರ್ವಿಸ್ ರಸ್ತೆಯಲ್ಲಿ ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದು ಕಾರು ಜಖಂಗೊಂಡ ಘಟನೆ ಆ. 9 ರಂದು ಶುಕ್ರವಾರ ಮಧ್ಯಾಹ್ನ ರಾಷ್ಟ್ರೀಯ ಹೆದ್ದಾರಿ 66ರ ಬೀಜಾಡಿ ಕ್ರಾಸ್ ಬಳಿ ನಡೆದಿದೆ.

ಕೋಟೇಶ್ವರ ಒಳ ಪೇಟೆಯಿಂದ ಸರ್ವಿಸ್ ರಸ್ತೆಯಲ್ಲಿ ಬಂದು ಹೈವೆ ದಾಟಲೆಂದು ಬೀಜಾಡಿ ಕ್ರಾಸ್ ಬಳಿ ನಿಂತ ಕಾರಿಗೆ ತೆಕ್ಕಟ್ಟೆಯಿಂದ ಕುಂದಾಪುರ ಕಡೆಗೆ ಚಲಿಸುತ್ತಿದ್ದ ಟಿಪ್ಪರ್ ಲಾರಿಯು ಬೀಜಾಡಿ ಕ್ರಾಸ್ ಬ್ಯಾರಿಕೇಡ್ ಸಮೀಪ ಚಾಲಕ ಹಠಾತ್ ಬ್ರೇಕ್ ಹಾಕಿದ್ದರಿಂದ ನಿಯಂತ್ರಣ ತಪ್ಪಿ ನಿಲ್ಲಿಸಿದ್ದ ಕಾರಿಗೆ ಡಿಕ್ಕಿ ಹೊಡೆದು ಡಿವೈಡರ್ ಹತ್ತಿ ನಿಂತಿದೆ.
ಡಿಕ್ಕಿರಭಸಕ್ಕೆ ಕಾರು ಜಖಂಗೊಂಡಿದ್ದು ಅದೃಷ್ಟವಶಾತ್ ಕಾರಿನ ಏರ್ ಬ್ಯಾಗ್ ತೆರದಿದ್ದರಿಂದ ಕಾರಿನಲ್ಲಿದ್ದ ಚಾಲಕ ಹಾಗೂ ಪ್ರಯಾಣಿಕ ಪ್ರಾಣಪಾಯದಿಂದ ಪಾರಾಗಿದ್ದಾರೆ.

ಈ ಅಪಘಾತಕ್ಕೆ ಟಿಪ್ಪರ್ ಚಾಲಕನ ಅತೀವೇಗ ಹಾಗೂ ಅಜಾಗರೂಕತೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಕುಂದಾಪುರ ಸಂಚಾರಿ ಠಾಣಾ ಪೊಲೀಸರು ಸ್ಥಳಕ್ಕಾಗಿಮಿಸಿ ಪರಿಶೀಲಿಸಿದ್ದಾರೆ.