ಡೈಲಿ ವಾರ್ತೆ: 10/ಆಗಸ್ಟ್/2024

ತಲ್ಲೂರು ನಿಂತ ಬಸ್ಸಿಗೆ ಹಿಂದಿನಿಂದ ಲಾರಿ ಡಿಕ್ಕಿ – ಹಲವು ಪ್ರಯಾಣಿಕರಿಗೆ ಗಾಯ

ಕುಂದಾಪುರ: ಪ್ರಯಾಣಿಕರನ್ನು ಇಳಿಸಲು ನಿಂತಿದ್ದ ಖಾಸಗಿ ಬಸ್ಸಿಗೆ ಹಿಂದಿನಿಂದ ಲಾರಿಯೊಂದು ಡಿಕ್ಕಿ ಹೊಡೆದು ವಿದ್ಯಾರ್ಥಿಗಳು ಸಹಿತ ಹಲವರು ಗಾಯಗೊಂಡ ಘಟನೆ ಆ. 10 ರಂದು ಶನಿವಾರ ಬೆಳಿಗ್ಗೆ ರಾಷ್ಟ್ರೀಯ ಹೆದ್ದಾರಿ 66 ರ ತಲ್ಲೂರು ಪ್ರವಾಸಿ ಹೋಟೆಲ್ ಬಳಿ ನಡೆದಿದೆ.

ಭಟ್ಕಳದಿಂದ ಕುಂದಾಪುರಕ್ಕೆ ಬರುತ್ತಿದ್ದ ಖಾಸಗಿ ಬಸ್ ತಲ್ಲೂರು ಪ್ರವಾಸಿ ಸಮೀಪ ಪ್ರಯಾಣಿಕರನ್ನು ಇಳಿಸಲು ಒಮ್ಮೆಲೆ ನಿಲ್ಲಿಸಿದ ಸಂದರ್ಭ ಬಸ್ಸಿನ ಹಿಂದೆ ಬರುತ್ತಿದ್ದ ಎಲ್ ಪಿ ಲಾರಿಯು ಬಸ್ಸಿನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ.

ಈ ಅಪಘಾತದಿಂದಾಗಿ ಬಸ್ಸಿನಲ್ಲಿದ್ದ ಹಲವು ಪ್ರಯಾಣಿಕರು, ವಿದ್ಯಾರ್ಥಿಗಳು ಗಂಭೀರ ಗಾಯಗೊಂಡಿದ್ದಾರೆ.
ಗಾಯಗೊಂಡವರನ್ನು ತಕ್ಷಣ ಸ್ಥಳೀಯರು ಕುಂದಾಪುರ ಆಸ್ಪತ್ರೆಗೆ ಸಾಗಿಸಿರುತ್ತಾರೆ.

ಕುಂದಾಪುರ ಸಂಚಾರಿ ಠಾಣಾ ಪೊಲೀಸರು ಸ್ಥಳಕ್ಕಾಗಿಮಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.