ಡೈಲಿ ವಾರ್ತೆ: 10/ಆಗಸ್ಟ್/2024

ಸಾಸ್ತಾನ: ಹೊಳೆಗೆ ಮಳಿ ಚಿಪ್ಪು ತೆಗೆಯಲು ಹೋಗಿ ಕಾಲು ಜಾರಿ ನೀರಿಗೆ ಬಿದ್ದು ವ್ಯಕ್ತಿ ಸಾವು

ಕೋಟ: ಹೊಳೆಗೆ ಮಳಿ ಚಿಪ್ಪು ತೆಗೆಯಲು ಹೋಗಿ ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಬ್ರಹ್ಮಾವರ ತಾಲೂಕಿನ ಸಾಸ್ತಾನದ ಕೋಡಿ ಗ್ರಾಮದಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿ ಸಾಸ್ತಾನ ಯಕ್ಷಿಮಠ ನಿವಾಸಿ ರಾಜು ಮರಕಾಲ (66) ಎಂದು ಗುರುತಿಸಲಾಗಿದೆ.

ಇವರು ಆ. 8 ರಂದು ಗುರುವಾರ ಸಂಜೆ ಹೊಳೆಯಲ್ಲಿ ಮಳಿ ಚಿಪ್ಪು ತೆಗೆಯಲೆಂದು ಹೋದವರು ಕಾಲು ಜಾರಿ ನೀರಿಗೆ ಬಿದ್ದು ಕಾಣೆಯಾಗಿರುತ್ತಾರೆ.
ಶನಿವಾರ (ಇಂದು) ಬೆಳಿಗ್ಗೆ ಕೋಡಿ ಹೊಳೆಯಲ್ಲಿ ಶವ ತೇಲುತ್ತಿರುವುದನ್ನು ಕಂಡು ಸ್ಥಳೀಯ ಮೀನುಗಾರರು ಕೊಡಲೇ ಕೋಟ ಪೊಲೀಸ್ ಠಾಣೆಗೆ ಹಾಗೂ ಸ್ಥಳೀಯ ಗ್ರಾಮ ಪಂಚಾಯತ್ ಗೆ ಮಾಹಿತಿ ನೀಡಿರುತ್ತಾರೆ.

ತಕ್ಷಣ ಸ್ಥಳಕ್ಕಾಗಮಿಸದ ಕೋಟ ಪೊಲೀಸ್ ಠಾಣಾ ಪಿಎಸ್ಐ ಸುಧಾ ಪ್ರಭು, ಎಎಸ್ಐ ರವಿಕುಮಾರ್, ಎಎಸ್ಐ ಗೋಪಾಲ್ ಪೂಜಾರಿ ಹಾಗೂ ಸಿಬ್ಬಂದಿ ವಿಜೇಂದ್ರ ರವರು ಕಾರ್ಯಾಚರಣೆಗೆ ಇಳಿದರು.

ಪಿಎಸ್ಐ ಸುಧಾ ಪ್ರಭು ಹಾಗೂ ಜೀವನ್ ಮಿತ್ರ ಆಂಬುಲೆನ್ಸ್ ಚಾಲಕ ಭರತ್ ಗಾಣಿಗ ರವರು ಸ್ಥಳೀಯರೊಂದಿಗೆ ದೋಣಿಯಲ್ಲಿ ಸಾಗಿ ಶವವನ್ನು ದಡಕ್ಕೆ ಸಾಗಿಸಿದರು.
ನಂತರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಲಾಯಿತು.

ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.