ಡೈಲಿ ವಾರ್ತೆ: 14/ಆಗಸ್ಟ್/2024

ಉಳ್ಳಾಲ: ಕಲ್ಲಾಪುವಿನಲ್ಲಿ ಸಮೀರ್‌ ಹತ್ಯೆ ಪ್ರಕರಣ – ನಾಲ್ವರು ವಶಕ್ಕೆ

ಮಂಗಳೂರು: ರೌಡಿ ಶೀಟರ್ ಕಡಪ್ಪರ ಸಮೀರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ತಿಳಿಸಿದ್ದಾರೆ.

ಸುರತ್ಕಲ್ ಕೃಷ್ಣಾಪುರದ ಮುಹಮ್ಮದ್ ನೌಶಾದ್, ಕಿನ್ಯ ನಿವಾಸಿ ನಿಯಾಝ್, ಬಜಾಲ್ ಶಾಂತಿನಗರದ ತನ್ವೀರ್ ಯಾನೆ ತನ್ನು ಮತ್ತು ಕಾಪು ಮಜೂರಿನ ಮುಹಮ್ಮದ್ ಇಕ್ಬಾಲ್ ಯಾನೆ ಇಕ್ಕು ಬಂಧಿತ ಆರೋಪಿಗಳು.

ಆರೋಪಿಗಳು ಕೃತ್ಯಕ್ಕೆ ಬಳಸಿದ ಕಾರನ್ನು ಉಳ್ಳಾಲ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಭಾನುವಾರ ರಾತ್ರಿ ತೊಕ್ಕೊಟ್ಟು ಫಾಸ್ಟ್ ಫುಡ್ ಗೆ ತಾಯಿ, ಪತ್ನಿ ಹಾಗೂ ಮಕ್ಕಳ ಜೊತೆ ಬಂದಿದ್ದ ಸಮೀರ್ ನನ್ನು ಕಾರಲ್ಲಿ ಫಾಲೋ ಮಾಡಿ ಬಂದ ನಾಲ್ವರ ತಂಡ ಕುಟುಂಬ ಸದಸ್ಯರ ಮುಂದೆಯೇ ಭೀಕರವಾಗಿ ಕೊಲೆ ಮಾಡಿ ಬಳಿಕ ಪರಾರಿಯಾಗಿದ್ದರು.