ಡೈಲಿ ವಾರ್ತೆ: 15/ಆಗಸ್ಟ್/2024

ನವೋದಯ ಫ್ರೆಂಡ್ಸ್ ಹರ್ತಟ್ಟು- ಕೋಟ ಇವರ ಆಶ್ರಯದಲ್ಲಿ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಸ್ವಚ್ಛತಾ ಅಭಿಯಾನ

ಕೋಟ: ನವೋದಯ ಫ್ರೆಂಡ್ಸ್ ಹರ್ತಟ್ಟು – ಕೋಟ ಇವರ ಆಶ್ರಯದಲ್ಲಿ 78ನೇ ವರ್ಷದ ಸ್ವಾತಂತ್ರ್ಯದಿನಾಚರಣೆಯ ಪ್ರಯುಕ್ತ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ನಡೆಯಿತು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆ ಉಪಾಧ್ಯಕ್ಷರಾದ ಪ್ರವೀಣ್ ದೇವಾಡಿಗ ಹರ್ತಟ್ಟು ವಹಿಸಿದ್ದರು.

ಮುಖ್ಯಅತಿಥಿಗಳಾದ ಸಿ.ಎ. ಬ್ಯಾಂಕ್ ನಿವೃತ್ತ ಅಧಿಕಾರಿ ನಾರಾಯಣ ಉಡುಪ ಮಾತನಾಡಿ ಹರ್ತಟ್ಟು ನವೋದಯ ಫ್ರೆಂಡ್ಸ್ ಹಲವಾರು ಸಮಾಜ ಮುಖಿ ಕಾರ್ಯಗಳನ್ನು ಮಾಡುತ್ತಾ ಬಂದಿದೆ. ಕಳೆದ ನಾಲ್ಕೈದು ದಿನಗಳಿಂದ ಈ ಸಂಸ್ಥೆ ಸದಸ್ಯರು ಸ್ವಚ್ಛತಾ ಕಾರ್ಯವನ್ನು ತೊಡಗಿಸಿಕೊಂಡಿದ್ದಾರೆ.
90 ವರ್ಷ ಹಳೆಯ ಬಾವಿಯನ್ನು ಸಂಪೂರ್ಣ ಸ್ವಚ್ಛಗೊಳಿಸಿದ ನಿಮಗೆ ನಿಜಕ್ಕೂ ಶ್ಲಾಘನೀಯ ಎಂದು
ಉಡುಪರು ಹೇಳಿದರು.

ಈ ಸಂದರ್ಭದಲ್ಲಿ ಮೊಹಮ್ಮದ್ ಅಫ್ಫಾನ್, ಮಾಜಿ ಗೌರವಾಧ್ಯಕ್ಷ ಕಿರಣ್ ಕುಮಾರ್ ಕೋಟ ಸಂಸ್ಥೆಯ ಕೋಶಾಧಿಕಾರಿ ಸತೀಶ್ ಹರ್ತಟ್ಟು ಹಾಗೂ
ಸಂಸ್ಥೆಯ ಸರ್ವ ಸದಸ್ಯರು, ಊರ ಮಹನೀಯರು ಪಾಲ್ಗೊಂಡಿದ್ದರು.

ಕೀರ್ತಿಶ್ ಪೂಜಾರಿ ಹರ್ತಟ್ಟು ಕಾರ್ಯಕ್ರಮವನ್ನು ಸ್ವಾಗತಿಸಿ, ವಂದಿಸಿದರು.
ಶ್ರೀನಾಥ್ ಕೋಟ ಕಾರ್ಯಕ್ರಮವನ್ನು ನಿರೂಪಿಸಿದರು.