ಡೈಲಿ ವಾರ್ತೆ: 15/ಆಗಸ್ಟ್/2024

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ

ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು.

ಈ ಸಮಯದಲ್ಲಿ ಶಾಲೆಗೆ ಬ್ರಹತ್ ಮೊತ್ತದ ಕೊಡುಗೆ ನೀಡಿದ ಶಾಲೆಯ ಹಳೆ ವಿಧ್ಯಾರ್ಥಿ ಮತ್ತು ಉದ್ಯಮಿಗಳಾದ ಸುಭಾಷ್ ಪೂಜಾರಿಯವರು 9 ಲಕ್ಷದ ಮೌಲ್ಯದ ಶಾಲಾ ವಾಹನವನ್ನು ಶಾಲೆಗೆ ಹಸ್ತಾಂತರಿಸಿದರು. ವೇದಿಕೆಯಲ್ಲಿ ದಾನಿಗಳಾದ ಸುಭಾಷ್ ಪೂಜಾರಿ ಹಾಗೂ ಶಾಲೆಯ ವಾಹನ ಇಂಧನ ವ್ಯೆವಸ್ಥೆ ಮಾಡಿದ ರಾಜೇಶ್ ಪೂಜಾರಿ ಇವರನ್ನು ಕೂಡಾ ಸನ್ಮಾನಿಸಲಾಯಿತು.

ಈ ಸಮಯದಲ್ಲಿ ಶಾಲೆಗೆ ಮಕ್ಕಳ ಸಂಖ್ಯೆ ಕಡಿಮೆಯಾಗಿದ್ದು ಊರಿನ ಪ್ರತಿಯೊಬ್ಬರು ಸರಕಾರಿ ಶಾಲೆ ಉಳಿಸುವಲ್ಲಿ ಯಶಸ್ವಿಯಾಗ ಬೇಕೆಂದರೆ ಶಾಲೆಗೆ ಮಕ್ಕಳ ಸಂಖ್ಯೆ ಹೆಚ್ಚಿಸುವಲ್ಲಿ ನಿಮ್ಮ ಪಾತ್ರ ಮುಖ್ಯವಾಗಿರುತ್ತದೆ ಎಂದು ಮುಖ್ಯ ಅತಿಥಿಗಳಾಗಿ ಆಗಮಿಸಿದ ವಲಯ ಶಿಕ್ಷಣ ಸಂಯೋಜಕರಾದ ಚಂದ್ರ ದೇವಾಡಿಗ ಹೇಳಿದರು. ಮುಖ್ಯ ಅತಿಥಿಗಳಾಗಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಬಾಬು ಹೆಗ್ಡೆ, ಶಂಕರ ಪೂಜಾರಿ, ಬಿ.ಜೆ.ಪಿ ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಹಳೆ ವಿಧ್ಯಾರ್ಥಿ ಸಂಘದ ಅಧ್ಯಕ್ಷ ಮಂಜುನಾಥ ಪೂಜಾರಿ, ಕಾರ್ಯದರ್ಶಿ ಸುಧಾಕರ ಮೋಗವೀರ, ಎಸ್.ಡಿ.ಎಂ.ಸಿ ಸದಸ್ಯೆ ನಾಗವೇಣಿ, ವಿಧ್ಯಾರ್ಥಿ ನಾಯಕ ವಿನಿತ್ ಕುಮಾರ್, ಉಪಸ್ಥಿತರಿದ್ದರು ಶಾಲಾ ಮುಖ್ಯೋಪಾಧ್ಯಾಯರಾದ ಮುಕ್ತಾ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಹಶಿಕ್ಷಕಿ ಸಾರೀಕಾ ನಿರೂಪಿಸಿದರು, ಸಂಗೀತ ವಂದಿಸಿದರು…