ಡೈಲಿ ವಾರ್ತೆ: 16/ಆಗಸ್ಟ್/2024

ಯುವ ವಿಚಾರ ವೇದಿಕೆ (ರಿ.) ಉಪ್ಪೂರು ಕೊಳಲಗಿರಿ ವತಿಯಿಂದ 78ನೇ ಸ್ವಾತಂತ್ಯೋತ್ಸವ ಆಚರಣೆ

ಉಡುಪಿ: ಯುವ ವಿಚಾರ ವೇದಿಕೆ (ರಿ.) ಉಪ್ಪೂರು ಕೊಳಲಗಿರಿ ವತಿಯಿಂದ  78ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣವನ್ನು ಜಾತಬೆಟ್ಟು ಹಿ.ಪ್ರಾ. ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರೂ ಹಾಗು ವೇದಿಕೆಯ ಸ್ಥಾಪಕ ಅಧ್ಯಕ್ಷರಾದ ಜಯಪ್ರಕಾಶ್ ರವರು ನೆರವೇರಿಸಿದರು. ಸ‌ಭಾಕಾರ್ಯಕ್ರಮದಲ್ಲಿ ಉಧ್ಯಮಿ ಗಣೇಶ್ ಪೂಜಾರಿ, ಉಪ್ಪೂರು ವ್ಯ.ಸೇ.ಸ‌. ಸಂಘದ ನಿರ್ದೇಶಕರಾದ ಶ್ರೀ ರಮೇಶ್ ಕರ್ಕೇರಾ, ನಿವೃತ್ತ ಬ್ಯಾಂಕ್ ಉದ್ಯೋಗಿ ಪ್ರಭಾಕರ್, ರೋಟೇರಿಯನ್ ವಿಜಯ್ ಮಾಯಾಡಿ, ಯುವ ಉದ್ಯಮಿ ಸಂದೀಪ್ ನಾಯಕ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ನಡೆಸಲಾದ ವಿವಿಧ ಮನೋರಂಜನಾ ಕ್ರೀಡೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಕ್ರೀಡಾ ಕಾರ್ಯದರ್ಶಿ ಸಂತೋಷ್ ಆಚಾರ್ಯ ವಿಜೇತರ ಪಟ್ಟಿ ವಾಚಿಸಿದರು, ವೇದಿಕೆಯಲ್ಲಿ ಉಪಸ್ಥಿತರಿದ್ದ ಅಧ್ಯಕ್ಷರಾದ ಶ್ರೀ ಸಂದೀಪ್ ಶೆಟ್ಟಿ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಶ್ರೀ ಸದಾಶಿವ ಧನ್ಯವಾದವಿತ್ತರು. ವೇದಿಕೆಯ ಕು. ಕಾವ್ಯ ಕಾರ್ಯಕ್ರಮ ನಿರೂಪಿಸಿದರು.