ಡೈಲಿ ವಾರ್ತೆ: 17/ಆಗಸ್ಟ್/2024

ಕುಂದಾಪುರ: ಹೆಮ್ಮಾಡಿ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನ ದಲ್ಲಿ ಕಳ್ಳತನ – ಸಾವಿರರೂ ರೂ. ನಗದು ದೋಚಿದ ಕಳ್ಳ, ಸಿಸಿಟಿವಿಯಲ್ಲಿ ಸೆರೆ

ಕುಂದಾಪುರ: ಹೆಮ್ಮಾಡಿ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನಕ್ಕೆ ನುಗ್ಗಿ ಸಾವಿರರೂ ರೂ. ನಗದು ಕಳ್ಳತನ ಮಾಡಿರುವ ಬಗ್ಗೆ ಆ. 17 ರಂದು ಶನಿವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.

ಇತ್ತೀಚಿಗೆ 7 ಕೋಟಿ ವೆಚ್ಚದಲ್ಲಿ ಜೀರ್ಣೋದ್ದಾರಗೊಂಡಿದ್ದ ಈ ದೇವಸ್ಥಾನದಲ್ಲಿ ಅಂದಾಜು ಸುಮಾರು 40 ಸಾವಿರಕ್ಕೂ ಅಧಿಕ ನಗದು ಕಳ್ಳತನ ಆಗಿದೆ ಎಂದು ತಿಳಿದು ಬಂದಿದೆ.

ಬಾಗಿಲ ಚಿಲಕದ ಸ್ಕ್ರೂ ತೆಗೆದು ಸುತ್ತು ಪೌಳಿ ಪ್ರವೇಶಿಸಿದ ಕಳ್ಳ, ತಿಂಗಳ ಸತ್ಯನಾರಾಯಣ ಪೂಜೆಗಾಗಿ ಸಂಗ್ರಹಿಸಿದ ಹಣವನ್ನು ಎಗರಿಸಿದ್ದಾನೆ.
ಚಪ್ಪಲಿ ಹಾಕಿಕೊಂಡೆ‌ ಕೈ ಮುಗಿದು ಬಳಿಕ ಕಳ್ಳತನ ಕೃತ್ಯ ನಡೆಸಿದ್ದು, ಕಾಣಿಕೆ ಡಬ್ಬಿ ಒಡೆದು ಹಣ ಎಗರಿಸಿದ ಕಳ್ಳನ‌ ಚಲನವಲನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.