ಡೈಲಿ ವಾರ್ತೆ: 17/ಆಗಸ್ಟ್/2024

ಸುರತ್ಕಲ್ ಎನ್.ಐ.ಟಿ.ಕೆ. ವಿದ್ಯಾರ್ಥಿ ಕಾಸರಗೋಡಿನಲ್ಲಿ ಕಾರು ಅಪಘಾತದಿಂದ ಮೃತ್ಯು!

ಕಾಸರಗೋಡು: ಚಾಲಕನ ನಿಯಂತ್ರಣ ತಪ್ಪಿ ಕಾರು ಮಗುಚಿ ಬಿದ್ದ ಪರಿಣಾಮ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಕಾಸರಗೋಡು ರಾಣಿಪುರ ಸಮೀಪದ ಪೆರುತ್ತಡಿ ಎಂಬಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ

ಸುರತ್ಕಲ್ ಎನ್.ಐ. ಟಿ. ಕೆ. ಯ ವಿದ್ಯಾರ್ಥಿ ರಾಯಚೂರು ನಿವಾಸಿ ಆರಿಬುದ್ದೀನ್ (21) ಮೃತರು.

ಇನ್ನು ಗಾಯಗೊಂಡವರನ್ನು ಪೂಡಂಕಲ್ ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿ ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಪ್ರವಾಸಿ ಕೇಂದ್ರವಾದ ರಾಣಿಪುರಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಚರಂಡಿಗೆ ಬಿದ್ದು ಅವಘಡ ಸಂಭವಿಸಿದೆ.

ರಾಜಾಪುರ ಠಾಣೆ ಪೊಲೀಸರು ಅಪಘಾತಕ್ಕೀಡಾದ ಸ್ಥಳಕ್ಕೆ ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ.