ಡೈಲಿ ವಾರ್ತೆ: 19/ಆಗಸ್ಟ್/2024

ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ತು ಇದರ ರಾಜ್ಯ ಉಪಾಧ್ಯಕ್ಷರಾಗಿ ರಮೇಶ್ ಹೆಚ್.ಎಸ್ ಅವರ ನೇಮಕ

ಬೆಂಗಳೂರು: ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ತು..
(Karnataka state labour council ) ಇದರ
ರಾಜ್ಯ ಉಪಾಧ್ಯಕ್ಷರಾಗಿ ರಮೇಶ್ ಹೆಚ್.ಎಸ್ ಇವರನ್ನು ಬೆಂಗಳೂರು ಕೇಂದ್ರ ಕಚೇರಿಯಿಂದ ಮುಂದಿನ ಅವಧಿಗೆ ನೇಮಕ ಮಾಡಿ ಅದೇಶಿಸಲಾಗಿದೆ.

ಶ್ರೀಯುತರು 2023 ರಂದು ಗಿನ್ನಿಸ್ ವರ್ಲ್ಡ್ ರೆಕಾರ್ಡ್
ಸಾಧನೆಗೆ ಭಾಜನರಾಗಿದ್ದಾರೆ.
ಹೀಗೆ ಹತ್ತು ಹಲವಾರು ಪ್ರಶಸ್ತಿಗಳನ್ನು ತಮ್ಮ ಮುಡಿಗೆರಿಸಿಕೊಂಡಿದ್ದಾರೆ.

ಮುಖ್ಯವಾಗಿ ಕರ್ನಾಟಕ ರಾಜ್ಯ ಅಲೆಮಾರಿ ಮತ್ತು ಅಲೆಮಾರಿ ಹಿಂದುಳಿದ ವರ್ಗಗಳ ಒಕ್ಕೂಟ ಬೆಂಗಳೂರು ಇವರು ನಡೆಸಿದ ಸಾಂಸ್ಕೃತಿಕ ಮತ್ತು ಸಾಹಿತ್ಯ ಕಲೋಸ್ಸವ ಕಾರ್ಯಕ್ರಮದಲ್ಲಿ ಸಮಾಜ ಸೇವಾ ವಿಭಾಗದ ‘ಸಾಧಕ ರತ್ನ’ ಪ್ರಶಸ್ತಿಯನ್ನು ಮುಡಿಗೇರಿಸಿ ಕೊಂಡಿತ್ತಾರೆ. ಅಲ್ಲದೆ ಅಲೆಮಾರಿ ಮತ್ತು ಅರೆ ಅಲೆಮಾರಿ ಸಲಹಾ ಸಮಿತಿಯ ಉಡುಪಿ ಜಿಲ್ಲಾ ನಾಮ ನಿರ್ದೇಶಿತ ಸದಸ್ಯರಾಗಿ ಕರ್ನಾಟಕ ಸರ್ಕಾರದಿಂದ ಆಯ್ಕೆಯಾಗಿಯೂ ತಮ್ಮ ಸೇವೆಯನ್ನು ಸಲ್ಲಿಸಿರುತ್ತಾರೆ.

ಹಲವು ಇಂಟರ್ನ್ಯಾಷನಲ್ ಪ್ರಶಸ್ತಿ ಕೂಡಾ ಪಡೆದಿರುತ್ತಾರೆ.
ಸ್ವಾಮಿ ವಿವೇಕಾನಂದ ಪ್ರಶಸ್ತಿಯನ್ನು ಶಿರೂರು ಮಠದ ಸ್ವಾಮಿಜಿಯಿಂದ ಪಡೆದಿರುವುದು ಇವರ ಹಿರಿಮೆ.