ಡೈಲಿ ವಾರ್ತೆ: 22/ಆಗಸ್ಟ್/2024

ಬಂಟ್ವಾಳ : ಕ್ಲಸ್ಟರ್ ಮಟ್ಟದ 2024-25 ನೇ ಸಾಲಿನ ಪ್ರತಿಭಾ ಕಾರಂಜಿ.

ಬಂಟ್ವಾಳ : ಬಂಟ್ವಾಳ ಕ್ಲಸ್ಟರ್ ಮಟ್ಟದ 2024-25 ನೇ ಸಾಲಿನ ಪ್ರತಿಭಾ ಕಾರಂಜಿ ಕಾರ್ಯಕ್ರಮವು ಬಂಟ್ವಾಳ ಕೆಳಗಿನ ಪೇಟೆಯ ತೌಹೀದ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು.

ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ಬಿ ಅಬ್ದುಲ್ ಖಾದರ್ ಮಾಸ್ಟರ್‌ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬಂಟ್ವಾಳ ಪುರಸಭಾ ಸದಸ್ಯ ಮುನೀಶ್ ಆಲಿ ಉದ್ಘಾಟಿಸಿದರು.

ವಲಯ ಸಂಪನ್ಮೂಲ ವ್ಯಕ್ತಿ ರಾಘವೇಂದ್ರ ಬಲ್ಲಾಳ್ ಮಾತನಾಡಿದರು. ಬಿ.ಆರ್.ಪಿ ನಾಗರತ್ನ, ಐ.ಆರ್.ಪಿ ಸುರೇಖಾ ಶಾಲಾ ಆಡಳಿತಾಧಿಕಾರಿ ಅಬ್ದುಲ್ ಸಮದ್ ಹುದವಿ, ಶಾಲಾ ಮಂಡಳಿಯ ಸದಸ್ಯ ಉಬೈದುಲ್ಲಾ ಉಪಸ್ಥಿತರಿದ್ದರು.

ವಿವಿಧ ಸ್ಪರ್ಧಾ ವಿಜೇತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರವನ್ನು ನೀಡಿ ಅಭಿನಂದಿಸಲಾಯಿತು.

ಬಂಟ್ವಾಳ ಕ್ಲಸ್ಟರ್‌ನ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಸತೀಶ್ ರಾವ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲಾ ಮುಖ್ಯ ಶಿಕ್ಷಕ ಇಬ್ರಾಹಿಂ ಸಲೀಂ ಪಿ ಸ್ವಾಗತಿಸಿದರು. ಸಹ ಶಿಕ್ಷಕಿ ಅಸ್ಮಾ ವಂದಿಸಿದರು. ನಿಶ್ಮಿತಾ ಮತ್ತು ಮೋಲಿ ಶಾಂತಿ ಸಲ್ಡಾನಾ ಕಾರ್ಯಕ್ರಮ ನಿರೂಪಿಸಿದರು.