ಡೈಲಿ ವಾರ್ತೆ: 23/ಆಗಸ್ಟ್/2024

ಸಾಲಿಗ್ರಾಮ: ಗಂಡ ಹೆಂಡತಿ ಜಗಳ ಕೊಲೆಯಲ್ಲಿ ಅಂತ್ಯ

ಕೋಟ: ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮ ಕಾರ್ಕಡ ಕಡಿದ ಹೆದ್ದಾರಿ ಅಂಗನವಾಡಿ ಕೇಂದ್ರದ ಸಮೀಪ ಬಾಡಿಗೆ ಮನೆಯಲ್ಲಿ ಈ ಘಟನೆ ನಡೆದಿದ್ದು ಶುಕ್ರವಾರ ಮುಂಜಾನೆ ಕೃತ್ಯ ಬೆಳಕಿಗೆ ಬಂದಿದೆ.

ಮೃತ ಮಹಿಳೆ ಜಯಶ್ರೀ ಎಂದು ಗುರುತಿಸಲಾಗಿದ್ದು ಇವರು ಕೊಪ್ಪಳ ಮೂಲದವರಾಗಿದ್ದು. 8 ತಿಂಗಳ ಹಿಂದೆ ಮದುವೆ ಯಾಗಿ ಕಾರ್ಕಡ ದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರೆ.

ಪತಿ ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯ ಗುಂಡ್ಮಿ ಗ್ರಾಮದ ಕಿರಣ್ ಉಪಾಧ್ಯ ಎಂದು ತಿಳಿದು ಬಂದಿದೆ.

ಶಂಕೆ ಮೇರೆಗೆ ಮೃತಳ ಪತಿ ಕಿರಣ್ ಉಪಾಧ್ಯ ಗುಂಡ್ಮಿ ಇವನನ್ನು ಕೋಟ ಪೊಲೀಸರು ಬಂದಿಸಿ ತನಿಖೆ ನಡೆಸುತ್ತಿದ್ದಾರೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.