ಡೈಲಿ ವಾರ್ತೆ: 23/ಆಗಸ್ಟ್/2024

ಕುಂದಾಪುರ ಬಿಜೆಪಿ ಕಾರ್ಯಾಲಯದಲ್ಲಿ ಮಹಿಳಾ ಮೋರ್ಚದ ನೇತೃತ್ವದ ವರಮಹಾಲಕ್ಷ್ಮಿ ಪೂಜಾ ಕಾರ್ಯದಲ್ಲಿ ಶಾಸಕ ಕಿರಣ್ ಕೊಡ್ಗಿ ಭಾಗಿ

ಕುಂದಾಪುರ: ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಹಿಳಾ ಮೋರ್ಚಾದ ವತಿಯಿಂದ ಆಯೋಜಿಸಲಾದ ವರಮಹಾಲಕ್ಷ್ಮಿಯ ಪೂಜೆ
ಹಿಂದೂ ಧರ್ಮದಲ್ಲಿ ಲಕ್ಷ್ಮಿಯನ್ನು ಸಂಪತ್ತು ಮತ್ತು ಸಮೃದ್ಧಿಯ ಅಧಿದೇವತೆಯೆಂದು ಕರೆಯಲಾಗುತ್ತದೆ.

ಲಕ್ಷ್ಮಿಯ ಆಶೀರ್ವಾದವನ್ನು ಪಡೆದುಕೊಳ್ಳಲು ವರಮಹಾಲಕ್ಷ್ಮಿ ಪೂಜೆ ಉತ್ತಮ ಅವಕಾಶ ಎನ್ನಬಹುದು. ಈ ಪೂಜೆಯನ್ನು ಆಚರಿಸುವುದರಿಂದ ಆ ವ್ಯಕ್ತಿಯ ಕುಟುಂಬದಲ್ಲಿ ಸಂತೋಷ, ಸಮೃದ್ಧಿ ನೆಲೆಸುತ್ತದೆ.

ಈ ನಿಟ್ಟಿನಲ್ಲಿ ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚ ಕುಂದಾಪುರ ಮಂಡಲ ಇವರ ನೇತೃತ್ವದಲ್ಲಿ ಶ್ರೀ ವರಮಹಾಲಕ್ಷ್ಮಿಯ ಸಂಭ್ರಮದ ಪೂಜೆಯು ಇಂದು ಕುಂದಾಪುರ ಬಿಜೆಪಿಯ ಕಾರ್ಯಾಲಯದಲ್ಲಿ ಆಯೋಜಿಸಲಾಯಿತು ಕಾರ್ಯಕ್ರಮದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿಯವರು ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ
ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ *
ಅನಿತಾ ಮರವಂತೆ, ನಳಿನಿ ಪ್ರದೀಪ್, ಕುಂದಾಪುರ ಮಂಡಲ ಬಿಜೆಪಿ ಕ್ಷೇತ್ರಧ್ಯಕ್ಷರಾದ ಸುರೇಶ್ ಶೆಟ್ಟಿ ಗೋಪಾಡಿ, ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ಪೂಜಾರಿ ವಕ್ವಾಡಿ, ಸುಧೀರ್.ಕೆ.ಎಸ್,
ಬಿಜೆಪಿ ಕುಂದಾಪುರ ಮಹಿಳಾ ಮೋರ್ಚಾದ ಅಧ್ಯಕ್ಷೆ ಸೌರಭಿ ಪೈ ಪ್ರಧಾನ ಕಾರ್ಯದರ್ಶಿ ಶ್ವೇತಾ ಶ್ರೀನಿಧಿ ಉಪಾಧ್ಯಾಯ ರಾಜ್ಯ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶಿಲ್ಪಾಜಿ ಸುವರ್ಣ
ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ,ಮಂಗಳೂರು ಬಿಜೆಪಿ ಸಹಪ್ರಭಾರಿ ರಾಜೇಶ ಕಾವೇರಿ,,ಜಿಲ್ಲಾ ಕಾರ್ಯದರ್ಶಿಗಳ
ಸದಾನಂದ ಬಳ್ಕೂರು, ಅನಿತಾ ಶ್ರೀಧರ, ಕುಂದಾಪುರ ಮಂಡಲದ ಉಪಾಧ್ಯಕ್ಷೆ ಅಶ್ವಿನಿ ದಿನೇಶ್ ಕುಂದಾಪುರ ಮಂಡಲ ಉಪಾಧ್ಯಕ್ಷ ಸುನೀಲ್ ಶೆಟ್ಟಿ ಮಂಡಲ ಕಾರ್ಯದರ್ಶಿ ನೇತ್ರಾವತಿ ಮಡಿವಾಳ, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಉಪಾಧ್ಯಕ್ಷೆ ಜ್ಯೋತಿ ಉದಯ ಪೂಜಾರಿ,ಜಿಲ್ಲಾ ಮಹಿಳಾ ಮೋರ್ಚಾದ ಕಾರ್ಯದರ್ಶಿ ನಿರ್ಮಲ್ ಶೆಟ್ಟಿ, ಕುಂದಾಪುರ ಬಿಜೆಪಿ ಮಹಿಳಾ ಮೋರ್ಚಾದ ಪದಾಧಿಕಾರಿಗಳು, ಹಾಗೂ ವಿವಿಧ ಮೋರ್ಚಾದ ಅಧ್ಯಕ್ಷರು ಪ್ರಧಾನ ಕಾರ್ಯದರ್ಶಿಗಳು ಹಾಗೂ ಪದಾಧಿಕಾರಿಗಳು, ಮತ್ತು ಪುರಸಭೆ, ಗ್ರಾಮ ಪಂಚಾಯತ್, ತಾಲೂಕ್ ಹಾಗೂ ಜಿಲ್ಲಾ ಪಂಚಾಯತ್, ಸದಸ್ಯರು ಮತ್ತು ಪಕ್ಷದ ಮುಖಂಡರು ಉಪಸ್ಥಿತರಿದ್ದರು.