ಡೈಲಿ ವಾರ್ತೆ: 23/ಆಗಸ್ಟ್/2024

ಬೀಜಾಡಿ ಮೂಡು ಶಾಲೆಗೆ ಅಧಿಕಾರಿಗಳೊಂದಿಗೆ ಶಾಸಕ ಕಿರಣ್ ಕೊಡ್ಗಿ ಭೇಟಿ

ಕುಂದಾಪುರ: ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬೀಜಾಡಿಯ ಮೂಡು ಶಾಲೆಗೆ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಶೋಭಾ ಶೆಟ್ಟಿ ಭೇಟಿ ನೀಡಿ ಶಾಲಾ ಕುಂದು ಕೊರತೆಯ ವಿಚಾರಣೆಗಳ ಬಗ್ಗೆ ಸುಧೀರ್ಘವಾಗಿ ಸಮಾಲೋಚನೆ ನಡೆಸಿದರು.

ಈ ಸಂದರ್ಭದಲ್ಲಿ ಬೀಜಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಕಾಶ್.ಜಿ. ಪೂಜಾರಿ, ಗೋಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಸುರೇಶ್ ಶೆಟ್ಟಿ, ಬೀಜಾಡಿ ಗ್ರಾಮ ಪಂಚಾಯಿತಿನ ಸದಸ್ಯರಾದ ವಾದಿರಾಜ ಹೆಬ್ಬಾರ್ ಹಾಗೂ ಚಂದ್ರ ಬಿ.ಎನ್. ಶಾಲಾ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ಶ್ರೀಮತಿ ಪ್ರತಿಮಾ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಅನುಪ್ ಕುಮಾರ,ಬಿ.ಆರ್, ಶಾಲಾ ಮುಖ್ಯೋಪಾಧ್ಯಾಯ ಗಣೇಶ್ ಶೆಟ್ಟಿ, ಉಪಸಿತರಿದ್ದರು.
ಸರ್ವರನ್ನು ಶಿಕ್ಷಕ ಪ್ರವೀಣ್ ಶೆಟ್ಟಿ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರು, ಮಕ್ಕಳ ಪೋಷಕರು, ಹಳೆ ವಿದ್ಯಾರ್ಥಿ ಸಂಘದ ಸದಸ್ಯರು, ವಿವಿಧ ಮುಖಂಡರು ಉಪಸ್ಥಿತರಿದ್ದರು.