ಡೈಲಿ ವಾರ್ತೆ: 23/ಆಗಸ್ಟ್/2024

ಮೀನುಗಾರಿಕಾ ನಿರ್ದೇಶಕರನ್ನು ಭೇಟಿ ಮಾಡಿದ ಕುಂದಾಪುರ ಶಾಸಕ ಕಿರಣ್ ಕೊಡ್ಗಿ

ಬೆಂಗಳೂರು: ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 2018 -19ರ ಸಾಲಿನ ಮಂಜೂರಾದ ಮತ್ಸ್ಯಾಶ್ರಯ ಯೋಜನೆ ಅಡಿಯ ತಡೆಹಿಡಿಯಲಾದ ಮೀನುಗಾರಿಕಾ ಮನೆಯ ಹಣವನ್ನು ಬಿಡುಗಡೆ ಮಾಡುವಂತೆ ಹಾಗೂ ಮಂಜೂರು ಮಾಡಿದ ಹೊಸ ಗುರಿಯಂತೆ ಪಲಾನುಭವಿ ಆಯ್ಕೆಯಾಗಿದ್ದು ಜರೂರು ಅನುಮೋದನೆ ನೀಡಿ ಪ್ರಗತಿ ಸಾದಿಸುವಂತೆ ಹಾಗೂ ಮೀನುಗಾರಿಕಾ ಕೊಂಡಿ ರಸ್ತೆಗಳನ್ನು ಅಭಿವೃದ್ಧಿಪಡಿಸುವ ಬಗ್ಗೆ ನಿನ್ನೆ ದಿವಸ ಬೆಂಗಳೂರಿನಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ಮೀನುಗಾರಿಕಾ ಇಲಾಖೆ ನಿರ್ದೇಶಕರಾದ ದಿನೇಶ್ ಕುಮಾರ್ ಇವರನ್ನು ಭೇಟಿ ಮಾಡಿ ಚರ್ಚಿಸಿದರು.