ಡೈಲಿ ವಾರ್ತೆ: 24/ಆಗಸ್ಟ್/2024

ಉಪ್ಲಾಡಿ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಆಗಸ್ಟ್ 27 ರಂದು ಮುದ್ದುಕೃಷ್ಣ ಸ್ಪರ್ಧೆ

ಕೋಟ: ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಬನ್ನಾಡಿ ಗ್ರಾಮದ ಉಪ್ಲಾಡಿ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆಶ್ರಯದಲ್ಲಿ ಆಗಸ್ಟ್ 27 ರಂದು ಸಮಯ ಬೆಳಿಗ್ಗೆ 9:00 ಗಂಟೆಯಿಂದ ಮಧ್ಯಾಹ್ನ 1:00 ಗಂಟೆಯ ತನಕ ಉಪ್ಲಾಡಿ ಶ್ರೀ ಗೋಪಾಲಕೃಷ್ಣ ಸಭಾಭವನದಲ್ಲಿ ಮುದ್ದುಕೃಷ್ಣ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.

ಸ್ಪರ್ಧೆಯು 0 -2ವರ್ಷ, 2-4ವರ್ಷ ಮತ್ತು 4-6 ವರ್ಷದೊಳಗಿನ ಮಕ್ಕಳಿಗೆ 3 ವಿಭಾಗಗಳಲ್ಲಿರುತ್ತದೆ. ಪ್ರತಿ ವಿಭಾಗಗಳಲ್ಲಿ ಪ್ರಥಮ, ದ್ವಿತೀಯ, ತೃತೀಯ ಬಹುಮಾನ ಮತ್ತು ಭಾಗವಹಿಸಿದ ಪ್ರತಿ ಮಕ್ಕಳಿಗೂ ಪ್ರಶಂಸನಾ ಪತ್ರ ನೀಡಲಾಗುವುದು. ಸ್ಪರ್ಧಾಳುಗಳಿಗೆ 1ನಿಮಿಷದ ಕಾಲಾವಕಾಶ ನೀಡಲಾಗುವುದು.
ವಿನೂತನ ಮಾದರಿಯ ವೇಷಭೂ಼ಷಣವನ್ನು ಸ್ಪರ್ಧಾಳುಗಳಿಗೆ ರಿಯಾಯಿತಿ ದರದಲ್ಲಿ (ರೂ.150/- ರಿಂದ ಪ್ರಾರಂಭ) ವ್ಯವಸ್ಥೆ ಮಾಡಲಾಗುವುದು. ಇಲ್ಲವೇ ಸ್ವತಃ ಪೋಷಕರೇ ಮಾಡಿಸಿಕೊಂಡು ಬರಬಹುದು ಹಾಗೂ ಆಗಸ್ಟ್ 27 ರಂದು ಬೆಳಿಗ್ಗೆ ಗಂಟೆ 8:30 ರೊಳಗೆ ಸ್ಪರ್ಧಾಳುಗಳ ಹೆಸರು ಮತ್ತು ವಿವರವನ್ನು ಯಾವುದೇ ಶುಲ್ಕವಿಲ್ಲದೇ ನೋಂದಾಯಿಸಬಹುದಾಗಿದೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಬನ್ನಾಡಿ ಸೋಮನಾಥ ಹೆಗ್ಡೆ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.