ಡೈಲಿ ವಾರ್ತೆ: 24/ಆಗಸ್ಟ್/2024

ಹುಬ್ಬಳ್ಳಿ: ಓಮಿನಿ ಕಾರು, ಲಾರಿ ಮಧ್ಯೆ ಭೀಕರ ಅಪಘಾತ, ಒಂದೇ ಕುಟುಂಬದ ಮೂವರ ದುರ್ಮರಣ

ಕೊಪ್ಪಳ: ತಾಲೂಕಿನ ಮಂಗಳಾಪುರ ಗ್ರಾಮದ ಒಂದೇ ಕುಟುಂಬದ ಮೂವರು ಅಪಘಾತದಲ್ಲಿ ಮೃತ ಪಟ್ಟಿದ್ದಾರೆ. ಹುಬ್ಬಳ್ಳಿಯ ಹೆಬ್ಬಸೂರ ಗ್ರಾಮದ ಬಳಿ ಶುಕ್ರವಾರ ತಡ ರಾತ್ರಿ ಘಟನೆ ನಡೆದಿದೆ.

ಕೊಪ್ಪಳ ತಾಲೂಕಿನ ಮಂಗಳಾಪುರ ಗ್ರಾಮದ ಜಾಫರಸಾಬ ಮಂಗಳೂರು(60), ಮುಸ್ತಫಾ (36), ಶೊಹೇಬ್(6) ಮೃತಪಟ್ಟವರಾಗಿದ್ದು, ಇಮಾಮ ಸಾಬ (60), ಹುಸೇನ ಬಾಷಾ (38), ಫೈಜಲ್ (8) ಗಂಭೀರ ಗಾಯಗೊಂಡವರಗಿದ್ದಾರೆ.
ಇವರು ಹಲಗಾಕ್ಕೆ ಚಿಕಿತ್ಸೆಗಾಗಿ ಓಮಿನಿ ವಾಹನದಲ್ಲಿ ತೆರಳಿದ್ದು, ರಾತ್ರಿ ವಾಪಾಸ್ ಬರುವ ವೇಳೆ ವಾಹನ ನಿಯಂತ್ರಣ ತಪ್ಪಿ ಲಾರಿಗೆ ಗುದ್ದಿದೆ ಎನ್ನಲಾಗಿದೆ. ಅಪಘಾತದಲ್ಲಿ ತೀರ್ವ ಗಾಯಗೊಂಡವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀರ್ವ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಒಂದೇ ಕುಟುಂಬದ ಮೂವರ ಸಾವಿನ ಸುದ್ದಿ ಕೇಳಿ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ.