ಡೈಲಿ ವಾರ್ತೆ: 28/ಆಗಸ್ಟ್/2024

ಬಂಟ್ವಾಳ: ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತ ಪವರ್ ಇಕ್ಬಾಲ್ ಪಕ್ಷದಿಂದ ತಟಸ್ಥ.!

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಸಕ್ರಿಯ ಹಾಗೂ ಮುಂಚೂಣಿಯಲ್ಲಿದ್ದ ಕಾಂಗ್ರೆಸ್ ಕಾರ್ಯಕರ್ತ ಪವರ್ ಇಕ್ಬಾಲ್ ಅವರ ನಡೆ ಅನುಮಾನಕ್ಕೆ ಎಡೆಮಾಡಿದೆ.

ಹಲವಾರು ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠೆಯಿಂದ ಹಗಲಿರಳು ದುಡಿದು ಸರ್ವ ಧಾರ್ಮಿಯರಲ್ಲಿ ಉತ್ತಮ ಬಾಂಧವ್ಯ ಹೊಂದಿದ ಪವರ್ ಇಕ್ಬಾಲ್ ರವರು ಇತ್ತೀಚಿನ ದಿನಗಳಲ್ಲಿ ಪಕ್ಷ ಚಟುವಟಿಕೆಗಳಲ್ಲಿ ತಟಸ್ಥ ಗೊಂಡಿರುವುದು ಪಕ್ಷದಲ್ಲಿ ಹಾಗೂ ಜನರಲ್ಲಿ ಅನುಮಾನ ಮೂಡಿದೆ. ಅಲ್ಲದೆ ಸಾರ್ವಜನಿಕರಿಗೆ ಉತ್ತಮ ಸೇವೆ ನೀಡಿ ಕಾಂಗ್ರೆಸ್ ಪಕ್ಷದ ಸಂಘಟನೆಗೆ ಸಹಕಾರಿಯಾಗಿದ್ದ ಪವರ್ ಇಕ್ಬಾಲ್ ನಿಲುವು ಮುಂದಿನ ದಿನಗಳಲ್ಲಿ ಪಕ್ಷಕ್ಕೆ ಮುಳುವಾಗಲಿದೆ ಎನ್ನುವುದು ಸಾರ್ವಜನಿಕರ ಅಭಿಪ್ರಾಯವಾಗಿದೆ.