ಡೈಲಿ ವಾರ್ತೆ: 31/ಆಗಸ್ಟ್/2024

ಬಂಟ್ವಾಳ: ಮಾರ್ನಬೈಲು ಕಾರು, ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ – ಓರ್ವ ಗಂಭೀರ

ಬಂಟ್ವಾಳ: ಟ್ರಕ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾದ ಘಟನೆ ಪಾಣೆಮಂಗಳೂರು ಸಮೀಪದ ಮಾರ್ನಬೈಲು ಎಂಬಲ್ಲಿ ಶನಿವಾರ ನಡೆದಿದೆ.

ಘಟನೆಯಿಂದ ಕಾರಿನಲ್ಲಿದ್ದ ಪಾಣೆಮಂಗಳೂರು ಸಮೀಪದ ಬೋಳಂಗಡಿ ನಿವಾಸಿ ಸಾಮಾಜಿಕ ಕಾರ್ಯಕರ್ತ ಎಂ.ಹೆಚ್. ಮುಸ್ತಫಾ ಅವರು ಗಂಭೀರ ಗಾಯಗೊಂಡಿದ್ದು ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೆಲ್ಕಾರ್ ನಿಂದ ದೇರಳಕಟ್ಟೆ ಕಡೆಗೆ ಹೋಗುತ್ತಿದ್ದ ಟ್ರಕ್ ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದ್ದು ಕಾರು ಸಂಪೂರ್ಣ ಜಖಂಗೊಂಡಿದೆ.

ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿಯಬೇಕಿದೆ.