ಡೈಲಿ ವಾರ್ತೆ: 01/Sep/2024

ಪೊಲೀಸರ ಮೇಲೆ ದಾಳಿಗೆ ಯತ್ನಿಸಿದ ದರೋಡೆಕೋರ – ಆರೋಪಿ ಕಾಲಿಗೆ ಗುಂಡೇಟು!

ಕಲಬುರಗಿ: ಕುಖ್ಯಾತ ದರೋಡೆಕೋರನ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿ ಬಂಧಿಸಿದ ಘಟನೆ ಶನಿವಾರ ಕಲಬುರಗಿ ನಗರದಲ್ಲಿ ನಡೆದಿದೆ.

ಆರೋಪಿ ಕುಖ್ಯಾತ ದರೋಡೆಕೋರ ಅವತಾರ್ ಸಿಂಗ್ ಎಂದು ತಿಳಿದು ಬಂದಿದೆ.
ಕಲಬುರಗಿ ಸಿಟಿ ಪೊಲೀಸರು ನಡೆಸಿದ ಫೈರಿಂಗ್‌ನಲ್ಲಿ ಆರೋಪಿ ಕಾಲಿಗೆ ಗುಂಡೇಟು ತಗುಲಿದೆ.

ಆರೋಪಿ ಅವತಾರ್ ಸಿಂಗ್ ಕಲಬುರಗಿ ವಿವಿಧ ಠಾಣೆ ಪೊಲೀಸರಿಗೆ ಬೇಕಾಗಿದ್ದನು. ಅಲ್ಲದೆ ಢಾಬಾವೊಂದರ ರಾಬರಿ ಕೇಸ್ ನಲ್ಲಿ ಪೊಲೀಸರಿಗೆ ಬೇಕಾಗಿದ್ದ, ಕಳೆದ ಮೂರು ದಿನಗಳಿಂದ ಅವತಾರ ಸಿಂಗ್ ಗಾಗಿ ಪೊಲೀಸರು ಹುಡುಕಾಡುತ್ತಿದ್ದರು. ಶನಿವಾರ ಉಪಳಾಂವ ಕ್ರಾಸ್ ಬಳಿ ಇರುವ ಮಾಹಿತಿ ಮೇರೆಗೆ ಅರೆಸ್ಟ್ ಮಾಡಲು ಪೊಲೀಸರು ಹೋಗಿದ್ದರು. ಈ ವೇಳೆ ಪೊಲೀಸರ ಮೇಲೆಯೇ ಚಾಕುಯಿಂದ ದಾಳಿಗೆ ಮುಂದಾದಾಗ ಅವತಾರ ಸಿಂಗ್ ಮೇಲೆ ಫೈರಿಂಗ್ ಮಾಡಿದ್ದಾರೆ. ಗುಂಡೇಟಿನಿಂದ ಗಾಯಗೊಂಡ ದರೋಡೆಕೋರನನ್ನು ಕಲಬುರಗಿ ಜಿಮ್ಸ್ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಕುರಿತು ಸಾಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.