ಡೈಲಿ ವಾರ್ತೆ: 01/Sep/2024

ಕುಂದಾಪುರ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿಯವರ ಅಧ್ಯಕ್ಷತೆಯಲ್ಲಿ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಭೆ

ಕುಂದಾಪುರ: ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಗರ್ ಹುಕ್ಕಂ ಸಾಗುವಳಿ ಸಕ್ರಮೀಕರಣ ಸಮಿತಿಯ ಸದಸ್ಯರೊಂದಿಗೆ ಸಭೆಯು ಆಡಳಿತ ಸೌಧ ತಾಲೂಕು ಕಚೇರಿಯ ಕೋರ್ಟ್ ಸಭಾಂಗಣದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ *ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿಯವರು ಅಧ್ಯಕ್ಷತೆಯಲ್ಲಿ ನೆರೆವೇರಿತು.

ಸಮಿತಿಯ ಸದಸ್ಯರ ಸಭೆಯಲ್ಲಿ ಅವರು ಮಾತನಾಡಿ ಅಗತ್ಯ ನ್ಯೂನ್ಯತೆಗಳನ್ನು ಸರಿಪಡಿಸಿಕೊಂಡು ಮುಂದಿನ ದಿನಗಳಲ್ಲಿ ಎಲ್ಲ ಅರ್ಜಿದಾರರಿಗೂ ಮಂಜೂರಾತಿಗೆ ಕ್ರಮ ವಹಿಸುವಂತೆ ಸೂಚಿಸಿದರು. ಹಾಗೆ ಪ್ರತಿ ತಿಂಗಳ ಎರಡು ಶನಿವಾರ ಕಡ್ಡಾಯವಾಗಿ ಸಭೆ ಕರೆಯುವಂತೆ, ಮತ್ತು ಬಾಕಿ ಉಳಿದಿರುವ ಕಡತಗಳನ್ನು ಅತಿ ಜರುರಾಗಿ ಫಲಾನುಭವಿಗಳಿಗೆ ಮಂಜೂರು ಮಾಡಲು ಕ್ರಮವಹಿಸುವಂತೆ ಸೂಚಿಸಲಾಯಿತು.
ಸಮಿತಿಯ ಕಾರ್ಯದರ್ಶಿಗಳಾದ ಹಾಗೂ ಬ್ರಹ್ಮಾವರ ತಹಸೀಲ್ದಾರ್ ಶ್ರೀಕಾಂತ್ ಮತ್ತು ಕುಂದಾಪುರ ತಹಸೀಲ್ದಾರ್ ಶೋಭಾ ಲಕ್ಷ್ಮಿ ಅವರು ಈ ಸಂದರ್ಭದಲ್ಲಿ ಹಾಜರಿದ್ದರು.