ಡೈಲಿ ವಾರ್ತೆ: 09/Sep/2024

ಕೋಟ: ಜೀವಕ್ಕೆ ಕುತ್ತಾದ ಮರಣಬಲೆ – ಪಾರಂಪಳ್ಳಿ ಪಡುಕರೆ ಸಮುದ್ರದಲ್ಲಿ ಮರಣಬಲೆ ಬಿಡಲು ಹೋಗಿ ವ್ಯಕ್ತಿ ನೀರುಪಾಲು – ಕೆ.ಎನ್.ಡಿ. ಸಿಬ್ಬಂದಿಗಳಿಂದ ರಕ್ಷಣೆ, ಆಸ್ಪತ್ರೆಗೆ ಸಾಗಿಸುವ ವೇಳೆ ಮೃತ್ಯು

ಕೋಟ: ಸಮುದ್ರದಲ್ಲಿ ಮರಣಬಲೆ ಬಿಡಲು ಹೋಗಿ ವ್ಯಕ್ತಿ ನೀರಲ್ಲಿ ಅಪಾಯಕ್ಕೊಳಗಾಗಿ ಮೃತಪಟ್ಟ ಘಟನೆ ಸೆ. 9 ರಂದು ಸೋಮವಾರ ಮಧ್ಯಾಹ್ನ ಪಾರಂಪಳ್ಳಿ ಪಡುಕರೆಯಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿ ಭಾಸ್ಕರ ಪೂಜಾರಿ (55) ಎಂದು ಗುರುತಿಸಲಾಗಿದೆ.

ಭಾಸ್ಕರ ಪೂಜಾರಿ ಪಾರಂಪಳ್ಳಿಯ ಮರಿನಾ ಮನೆ ಗೆಸ್ಟ್ ಹೌಸ್ ಸಮೀಪ ಸಮುದ್ರದಲ್ಲಿ ಬಿಟ್ಟಿದ್ದ ಮರಣಬಲೆಯನ್ನು ಮೇಲೇತ್ತಲು ಸಮುದ್ರಕ್ಕೆ ಇಳಿದಾಗ ಸಮುದ್ರದ ಅಲೆಗೆ ಸಿಲುಕಿ ಮುಳುಗಿರುತ್ತಾರೆ.
ತಕ್ಷಣ ಮಲ್ಪೆ ಕರಾವಳಿ ಪೊಲೀಸ್ ಠಾಣೆಯ ಕೆ.ಎನ್.ಡಿ. ಸಿಬ್ಬಂದಿಗಳಾದ ಸತೀಶ್ ಮತ್ತು ಸುದರ್ಶನ್ ಎಸ್. ಕುಂದರ್ ಇವರು ಸಮುದ್ರಕ್ಕೆ ಹಾರಿ ವ್ಯಕ್ತಿಯನ್ನು ದಡಕ್ಕೆ ತಂದು ಸ್ಥಳೀಯರ ನೆರವಿನಿಂದ ಆಸ್ಪತ್ರೆಗೆ ಸಾಗಿಸಿರುತ್ತಾರೆ. ಆದರೆ ಆಸ್ಪತ್ರೆಯಲ್ಲಿ ವೈದ್ಯರು ಪರೀಕ್ಷಿಸಿ ಭಾಸ್ಕರ್ ಪೂಜಾರಿ ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ. ರಕ್ಷಣಾ ಪಡೆಯ ಶ್ರಮ ವ್ಯರ್ಥವಾದ ಬಗ್ಗೆ ಅತೀವ ಬೇಸರ ಉಂಟುಮಾಡಿದೆ.

ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.