ಡೈಲಿ ವಾರ್ತೆ: 12/Sep/2024

ದಾನಿಗಳು ಕೂಡ ಮಾಡಿದ ಪ್ರಾಥಮಿಕ ಆರೋಗ್ಯ ಕೇಂದ್ರದ ಹೆಚ್ಚುವರಿ ಕೊಠಡಿಯ ಗುದ್ದಲಿ ಪೂಜೆಯಲ್ಲಿ: ಶಾಸಕ ಕಿರಣ್ ಕೊಡ್ಗಿ ಭಾಗಿ

ಕೋಟ: ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಾರ್ವಜನಿಕರ ಬೇಡಿಕೆಯಂತೆ ಸಾಸ್ತಾನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಅಮೇರಿಕೆರ್ಸ್ ಇಂಡಿಯಾ ಪ್ರತಿಷ್ಠಿತ ಸಂಸ್ಥೆಯ ದಾನಿಗಳು ಕೂಡ ಮಾಡಿದ ಸಾಸ್ತಾನ ಪ್ರಾಥಮಿಕ ಆರೋಗ್ಯ ಕೇಂದ್ರದ ಹೆಚ್ಚುವರಿ ಕೊಠಡಿಯ ನಿರ್ಮಾಣದ ವೆಚ್ಚವನ್ನು ಸಂಸ್ಥೆಯು ವಹಿಸಿಕೊಂಡಿದ್ದು ಇದರ ಗುದ್ದಲಿ ಪೂಜೆಯನ್ನು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿ ಯವರು ಗುದ್ದಲಿ ಪೂಜೆಯನ್ನು ನೆರವೇರಿಸಿ ದಾನಿಗಳಿಗೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ರಾಜ್ಯ ಒಬಿಸಿ ಮೋರ್ಚಾ ಉಪಾಧ್ಯಕ್ಷ ಐರೋಡಿ ವಿಠ್ಠಲ್ ಪೂಜಾರಿ, ಕೋಟ ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ಸುರೇಶ್ ಕುಂದರ್, ಶಕ್ತಿ ಕೇಂದ್ರದ ಅಧ್ಯಕ್ಷ ರಮೇಶ್ ಕಾರಂತ್, ಪಾಂಡೇಶ್ವರ ಶಕ್ತಿ ಕೇಂದ್ರದ ಅಧ್ಯಕ್ಷ ಸುರೇಶ್ ಪೂಜಾರಿ, ಮಾಜಿ ತಾಲೂಕು ಪಂಚಾಯಿತಿನ ಅಧ್ಯಕ್ಷೆ ಜ್ಯೋತಿ ಉದಯ್ ಪೂಜಾರಿ, ಪಾಂಡೇಶ್ವರ ಗ್ರಾಮ ಪಂಚಾಯತ್ ಹಾಗೂ ಐರೋಡಿ ಗ್ರಾಮ ಪಂಚಾಯತಿನ ಸದಸ್ಯರು, ಪಕ್ಷದ ವಿವಿಧ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.