ಡೈಲಿ ವಾರ್ತೆ: 14/Sep/2024

ಚಿತ್ರದುರ್ಗದಲ್ಲಿ ಹಾಡಹಗಲೇ ಬಾಲಕಿಯ ಅಪಹರಣಕ್ಕೆ ಯತ್ನ: ಇಬ್ಬರು ಆರೋಪಿಗಳ ಬಂಧನ!

ಚಿತ್ರದುರ್ಗ: ಹಾಡಹಗಲೇ 17 ವರ್ಷದ ಮುಸ್ಲಿಂ ಬಾಲಕಿಯನ್ನು ಕಿಡ್ನ್ಯಾಪ್‌ಗೆ ಯತ್ನಿಸಿದ ಘಟನೆ
ಚಿತ್ರದುರ್ಗದ ಹೊಳಲ್ಕೆರೆ ರಸ್ತೆಯ ಜ್ಞಾನ ಭಾರತಿ ಶಾಲೆ ಮುಂಭಾಗದಲ್ಲಿ ನಡೆದಿದೆ.

ಸದ್ಯ ಆನಂದ್ ಮತ್ತು ಪಾರ್ಥ ಎಂಬ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.
ಕಿರಾತಕರಿಬ್ಬರು ಬಾಲಕಿಯನ್ನು ಎಳೆದೊಯ್ಯುವಾಗ ಬಾಲಕಿ ಕಿರುಚಾಡಿದ್ದರಿಂದ ಬೆದರಿದ ಇಬ್ಬರು ಅಪಹರಣಕಾರರು
ಬಾಲಕಿಯನ್ನು ಬಿಟ್ಟು ಎಸ್ಕೇಪ್‌ ಆಗಲು ಯತ್ನಿಸಿದ್ದಾರೆ. ಬಾಲಕಿ ಕಿರುಚಾಟ ಕೇಳಿದ ಸ್ಥಳೀಯರು ಕೂಡಲೇ ಓರ್ವನನ್ನು ಹಿಡಿದು ಥಳಿಸಿದ್ದಾರೆ.

ಆರೋಪಿ ಟಗರುಹಟ್ಟಿಯ ಪಾರ್ಥ ಎಂಬಾತನನ್ನು ಹಿಡಿದು ಸ್ಥಳೀಯರು ಧರ್ಮದೇಟು ನೀಡಿದ್ದಾರೆ. ಇತ್ತ ಸ್ಥಳದಲ್ಲೇ ಇದ್ದ ಬಾಲಕಿ ಚಪ್ಪಲಿ ಹಿಡಿದು ಮನಬಂದಂತೆ ಹೊಡೆದಿದ್ದಾಳೆ. ಬಳಿಕ ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.
ಇಬ್ಬರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಕಿಡ್ನ್ಯಾಪ್‌ ಮಾಡಲು ಬಳಸಿದ ಕಾರನ್ನು ವಶಕ್ಕೆ ಪಡೆಯಲಾಗಿದೆ. ಮಹಿಳಾ ಪೊಲೀಸ್ ಠಾಣೆಯಲ್ಲಿ ಬಾಲಕಿಯಿಂದ ದೂರು ದಾಖಲಾಗಿದೆ.