ಡೈಲಿ ವಾರ್ತೆ: 15/Sep/2024

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಅವರಿಂದ ಗಿಡನೆಡುವ ಕಾರ್ಯಕ್ರಮಕ್ಕೆ ಚಾಲನೆ

ಕೋಟ: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರು ಗೀತಾನಂದ ಫೌಂಡೇಶನ್ ಸಹಕಾರದಲ್ಲಿ ಏರ್ಪಡಿಸಿದ ಗಿಡ ನೆಡುವ ಕಾರ್ಯಕ್ರಮಕ್ಕೆ ಕೋಟ ಆರಕ್ಷಕ ಠಾಣೆಯ ಮುಂಬಾಗ ಗಿಡನೆಡವುದರೊಂದಿಗೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಗೀತಾನಂದ ಫೌಂಡೇಶನ್ ಪ್ರವರ್ತಕರಾದ ಆನಂದ ಸಿ ಕುಂದರ್, ಕೋಟ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಪಾಂಡು ಪೂಜಾರಿ ಮತ್ತು ಸದಸ್ಯರಾದ ಚಂದ್ರ ಆಚಾರ್, ಚಂದ್ರ ಪೂಜಾರಿ, ಸಂತೋಷ ಪ್ರಭು, ಶೇಖರ್ ಗಿಳಿಯಾರು, ಆರಕ್ಷಕ ಠಾಣಾ ಸಿಬ್ಬಂದಿ, ಜನತಾ ಸಮೂಹ ಸಂಸ್ಥೆ ವ್ಯವಸ್ಥಾಪಕಾದ ಶ್ರೀನಿವಾಸ ಕುಂದರ್, ಬಾಳೆಬೆಟ್ಟು ಫ್ರೆಂಡ್ಸ್ ಅಧ್ಯಕ್ಷರಾದ ರತ್ನಾಕರ ಪೂಜಾರಿ, ಸಂಘಟನಾ ಪ್ರಮುಖ ಪ್ರಸಾದ್ ಬಿಲ್ಲವ ಉಪಸ್ಥಿತರಿದ್ದರು.


ನಂತರ ಕೋಟ ಅಮೃತೇಶ್ವರೀ ಸರ್ಕಲ್ ನಲ್ಲಿ ಕೋಟ ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿಗಳೊಂದಿಗೆ ಮಾನವ ಸರಪಳಿಯಲ್ಲಿ ಕೈ ಜೋಡಿಸಿದರು.