ಡೈಲಿ ವಾರ್ತೆ: 16/Sep/2024

ಸುರತ್ಕಲ್: ಕಾಟಿಪಳ್ಳ ಮಸೀದಿ ಕಲ್ಲು ತೂರಾಟ ಪ್ರಕರಣ – ಐವರನ್ನು ಬಂಧಿಸಿದ ಪೊಲೀಸರು

ಸುರತ್ಕಲ್:‌ ಇಲ್ಲಿನ ಕಾಟಿಪಳ್ಳ 3ನೇ ಬ್ಲಾಕ್ ಮಸೀದಿಯ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆ. 16 ರಂದು ಸೋಮವಾರ ಐವರನ್ನು ಪೊಲೀಸರು ಬಂಧಿಸಿದ್ದಾರೆ.

ಕೃಷ್ಣಾಪುರ ಕಾಟಿಪಳ್ಳ ಬಳಿ ಇರುವ ಮಸೀದಿಗೆ ಬೈಕ್ ನಲ್ಲಿ ಬಂದ ಕಿಡಿಗೇಡಿಗಳ ತಂಡವೊಂದು ಕಲ್ಲು ಬಿಸಾಡಿ ಸ್ಥಳದಿಂದ ಪರಾರಿಯಾಗಿದ್ದರು.

ಇದೀಗ ಪೊಲೀಸರ ತಂಡವು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಕಟ್ಲ ಆಶ್ರಯ ಕಾಲ ನಿವಾಸಿ ಭರತ್, ಕಟ್ಲ ಆಶ್ರಯ ಕಾಲ ನಿವಾಸಿ ಚೆನ್ನಪ್ಪ, ಹಳೆಯಂಗಡಿ ನಿವಾಸಿ ನಿತಿನ್, ಈಶ್ವರ ನಗರ ಮನು, ಹಾಗೂ ಮುಂಚೂರಿನ ಸುಜಿತ್ ಬಂಧಿತರು. ಸುರತ್ಕಲ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.