ಡೈಲಿ ವಾರ್ತೆ: 20/Sep/2024

ಕಸ್ತೂರಿ ರಂಗನ್ ವರದಿಯ ಪ್ರಮುಖ ಅಂಶಗಳ ಬಗ್ಗೆ ಅರಣ್ಯ ಸಚಿವರೊಂದಿಗೆ ಚರ್ಚೆ: ಶಾಸಕ ಕಿರಣ್ ಕೊಡ್ಗಿ

ಬೆಂಗಳೂರು: ಕಸ್ತೂರಿ ರಂಗನ್ ವರದಿ ಅನುಷ್ಠಾನಕ್ಕೆ ಸಂಬಂಧಪಟ್ಟಂತೆ ಕುಂದಾಪುರದ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿ ಅವರು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆ ಸಚಿವರಾದ ಈಶ್ವರ್ ಖಂಡ್ರೆ ಅವರನ್ನು ಭೇಟಿಯಾಗಿ ಪಶ್ಚಿಮ ಘಟ್ಟವನ್ನು ಪರಿಸರ ಸೂಕ್ಷ್ಮ ವಲಯ ಎಂದು ಘೋಷಣೆ ಮಾಡುವ ಕುರಿತಂತೆ ಕಸ್ತೂರಿರಂಗನ್ ವರದಿ ಬರುವ ಮೊದಲಿನಂತೆ ಯಥಾಸ್ಥಿತಿ ಇರುವಂತೆ ಹಾಗೂ ಕಸ್ತೂರಿ ರಂಗನ್ ಸಮಿತಿಯ ವರದಿಯಿಂದ ಜನರಿಗೆ ಆಗುವ ತೊಂದರೆಗಳ ಬಗ್ಗೆ ಸುಧೀರ್ಘವಾಗಿ ಪ್ರಮುಖ ಅಂಶಗಳ ಬಗ್ಗೆ ಚರ್ಚಿಸಿದರು ಈ ಸಂದರ್ಭದಲ್ಲಿ ಜಿಲ್ಲೆಯ ಉಭಯ ಶಾಸಕರು ಜೊತೆಗಿದ್ದರು.