ಡೈಲಿ ವಾರ್ತೆ: 20/Sep/2024

ಮೀನುಗಾರರ ಸಮಸ್ಯೆಯ ಬಗ್ಗೆ ಶಾಸಕ ಕಿರಣ್ ಕೊಡ್ಗಿ ಮನವರಿಕೆ

ಬೆಂಗಳೂರು: ಕರಾವಳಿ ಜಿಲ್ಲೆಯ ಮೀನುಗಾರರ ದೋಣಿಯ ಆರ್.ಸಿ. ನೀಡದಿರುವ ಹಿನ್ನೆಲೆಯಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ಮೀನುಗಾರಿಕೆ ಇಲಾಖೆಯ ಸೆಕ್ರೆಟರಿ ಡಾ.ಅಜಯ್ ನಾಗಭೂಷಣ್ ಅವರನ್ನು ಭೇಟಿಯಾಗಿ ಮೀನುಗಾರರ ಸಮಸ್ಯೆ ಬಗ್ಗೆ ಸಮಗ್ರವಾಗಿ ವಿವರಿಸಿ ಕೂಡಲೇ ಆರ್.ಸಿ.ನೀಡುವಂತೆ ಅವರಿಗೆ ಮನವರಿಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿಯವರು ಜೊತೆಗಿದ್ದರು.