ಡೈಲಿ ವಾರ್ತೆ: 20/Sep/2024

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಉದ್ಯಮಿ ಸುರೇಂದ್ರ ಶೆಟ್ಟಿ ಆಯ್ಕೆ

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಕೋಟೇಶ್ವರದ ಸುರೇಂದ್ರ ಶೆಟ್ಟಿಯವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ.

ಒಟ್ಟು 9 ಮಂದಿಯನ್ನು ವ್ಯವಸ್ಥಾಪನಾ ಸಮಿತಿಗೆ ಸರಕಾರ ಆಯ್ಕೆ ಮಾಡಿದೆ.
ಸುರೇಂದ್ರ ಶೆಟ್ಟಿಯವರು ಕಾರ್ಕಳ ಹಿರಿಯoಗಡಿ ನಿವಾಸಿ ಆಗಿದ್ದು ಕೋಟೇಶ್ವರದಲ್ಲಿ ತನ್ನ ಉದ್ಯಮವನ್ನು ಹೊಂದಿದ್ದಾರೆ. ಸುಮಾರು 15 ವರ್ಷಗಳಿಂದ ಅವರು ಕುಂದಾಪುರದಲ್ಲಿ ಉದ್ಯಮ ನಡೆಸುತ್ತಿದ್ದಾರೆ.

ಕಾರ್ಕಳ ಶಿವತಿಕೆರೆ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ ಕೂಡ ಅವರು ಸೇವೆ ಸಲ್ಲಿಸಿದ್ದರು.