ಡೈಲಿ ವಾರ್ತೆ: 22/Sep/2024

ಬೆಂಗಳೂರು: ಆಟದ ಮೈದಾನದ ಗೇಟ್ ಬಿದ್ದು ಬಾಲಕ ಮೃತ್ಯು!

ಬೆಂಗಳೂರು: ಮೈದಾನದ ಗೇಟ್ ಮುರಿದು ತಲೆಗೆ ಬಿದ್ದು ಬಾಲಕ ಸಾವಿಗೀಡಾಗಿರುವ ಘಟನೆ ಮಲ್ಲೇಶ್ವರಂ ಬಿಬಿಎಂಪಿ ಗ್ರೌಂಡ್‌ನಲ್ಲಿ ನಡೆದಿದೆ.

ಮೃತ ಬಾಲಕ ನಿರಂಜನ್ (10) ಎಂದು ಗುರುತಿಸಲಾಗಿದೆ.
ಸಂಜೆ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಆಟ ಆಡಲು ಬಾಲಕ ಮೈದಾನಕ್ಕೆ ಬಂದಿದ್ದ. ಈ ವೇಳೆ ಬಾಲಕ ಗೇಟ್ ಬಳಿಯೇ ನಿಂತಿದ್ದು, ಗೇಟ್ ತೆರೆಯುತ್ತಿದ್ದಂತೆ ಆತನ ತಲೆ ಮೇಲೆ ಮುರಿದು ಬಿದ್ದಿದೆ. ಪರಿಣಾಮವಾಗಿ ತಲೆಗೆ ತೀವ್ರ ಗಾಯವಾಗಿ ಬಾಲಕ ಮೃತಪಟ್ಟಿದ್ದಾನೆ. ಘಟನೆ ನಡೆದ ಸ್ಥಳಕ್ಕೆ ಮಲ್ಲೇಶ್ವರಂ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

ಮಲ್ಲೇಶ್ವರಂ ಫೈಪ್‌ಲೈನ್‌ನಲ್ಲಿ ವಾಸವಾಗಿದ್ದ ಆಟೋ ಚಾಲಕ ವಿಜಯಕುಮಾರ್ ಮತ್ತು ಪ್ರಿಯಾ ದಂಪತಿಯ ಮೊದಲನೇ ಪುತ್ರ ನಿರಂಜನ್. ಮಲ್ಲೇಶ್ವರಂನ ಬಿಬಿಎಂಪಿ ಶಾಲೆಯಲ್ಲಿ ಬಾಲಕ 5ನೇ ತರಗತಿಯಲ್ಲಿ ಓದುತ್ತಿದ್ದ.