ಡೈಲಿ ವಾರ್ತೆ: 23/Sep/2024

ತಿರುಪತಿ ಪ್ರಸಾದದಲ್ಲಿ ಅಪವಿತ್ರ: ಶೃಂಗೇರಿ ಮಹಾಸ್ವಾಮಿಗಳಿಂದ ಉಪವಾಸ, ಮೌನ ವ್ರತ

ತಿರುಪತಿ ಪ್ರಸಾದದ ವಿಷಯದಲ್ಲಿ ನಡೆದ ಅಪವಿತ್ರ ಶುದ್ಧಿಗಾಗಿ ಶೃಂಗೇರಿ ಮಹಾಸಂಸ್ಥಾನದ ಶ್ರೀ ಅಭಿನವ ಶಂಕರಭಾರತಿ ಮಹಾಸ್ವಾಮಿಗಳು ಉಪವಾಸ ಹಾಗೂ ಮೌನ ವ್ರತ ಮಾಡಲಿದ್ದಾರೆ.

ತಿರುಪತಿ ತಿಮ್ಮಪ್ಪನ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬಿನಾಂಶ ಹಾಗೂ ಮೀನಿನ ಎಣ್ಣೆ ಕಲಬೆರಕೆ ಅಪವಿತ್ರ ಶುದ್ಧಿಗಾಗಿ ಶ್ರೀಗಳು ಮೂರು ದಿನಗಳ ಕಾಲ ಉಪವಾಸ ಹಾಗೂ ಮೌನ ವ್ರತ ಕೈಗೊಳ್ಳಲಿದ್ದಾರೆ. ಆಗಿರುವ ಅಪಚಾರಕ್ಕೆ ಸಾರ್ವಜನಿಕರು ಪ್ರಾಯಶ್ಚಿತ್ತ ಮಾಡಿಕೊಳ್ಳಲು ಶ್ರೀಗಳು ಕರೆ ನೀಡಿದ್ದಾರೆ.

ಯಾವುದೇ ಪುರೋಹಿತರ ಅಗತ್ಯವಿಲ್ಲದೇ ಸಾರ್ವಜನಿಕರು ಮನೆಯಲ್ಲಿಯೇ ಮೂರು ರೀತಿಯ ಸರಳ ಪ್ರಾಯಶ್ಚಿತ್ತ ವಿಧಾನ ಮಾಡಿಕೊಳ್ಳುವ ವಿಧಾನವನ್ನು ಸೂಚಿಸಿದ್ದಾರೆ.