ಡೈಲಿ ವಾರ್ತೆ: 26/Sep/2024

ಮೂಡ ಹಗರಣದಲ್ಲಿ ಮುಖ್ಯಮಂತ್ರಿಗಳ ರಾಜೀನಾಮೆಗೆ ಅಗ್ರಹಿಸಿ, ಪ್ರತಿಭಟನೆಯಲ್ಲಿ: ಕುಂದಾಪುರ ಶಾಸಕ ಕಿರಣ್ ಕೊಡ್ಗಿ ಭಾಗಿ

ಮೂಡ ಹಗರಣದಲ್ಲಿ ಭಾಗಿಯಾಗಿರುವ ಸಂಬಂಧ ಮುಖ್ಯಮಂತ್ರಿಗಳ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಆದೇಶವನ್ನು ಕರ್ನಾಟಕ ಉಚ್ಚ ನ್ಯಾಯಾಲಯ ಎತ್ತಿ ಹಿಡಿದಿದ್ದು,

ಈ ಸಲುವಾಗಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯಯವರ ರಾಜೀನಾಮೆಗೆ ಆಗ್ರಹಿಸಿ.

ಇಂದು ರಾಜಧಾನಿ ಬೆಂಗಳೂರಿನ ವಿಧಾನಸೌಧದ ಮುಂಭಾಗದಲ್ಲಿರುವ ಗಾಂಧಿ ಪ್ರತಿಮೆ ಎದುರು ಸಂಸದರು, ಶಾಸಕರು, ಮಾಜಿ ಶಾಸಕರ ಉಪಸ್ಥಿತಿಯಲ್ಲಿ ನಡೆದ ಪ್ರತಿಭಟನೆಯಲ್ಲಿ

ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿ ಅವರು ಭಾಗವಹಿಸಿದರು.