ಡೈಲಿ ವಾರ್ತೆ: 27/Sep/2024

ಬೈಂದೂರು ಮಾಜಿ ಶಾಸಕ ಕೆ. ಲಕ್ಷ್ಮೀನಾರಾಯಣ ನಿಧನ

ಬೈಂದೂರು: ಮಾಜಿ ಶಾಸಕ ಬೈಂದೂರು ಕೆ ಲಕ್ಷ್ಮೀ ನಾಯರಾಯಣ (85) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ಮುಂಜಾನೆ ನಿಧನರಾಗಿದ್ದಾರೆ.

ಬೆಂಗಳೂರಿನಲ್ಲಿ ವಾಸವಾಗಿದ್ದ ಇವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು.

ಮೃತರು ಓರ್ವ ಪುತ್ರ, ಓರ್ವ ಪುತ್ರಿ ಸಹಿತ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಮೃತರ ಅಂತಿಮ ದರ್ಶನಕ್ಕಾಗಿ ಅವರ ಡಾಲರ್ ಕಾಲೋನಿಯಲ್ಲಿರುವ ಮನೆಯಲ್ಲಿ ಬೆಳಿಗ್ಗೆ 10.30 ರಿಂದ ಇರಿಸಲಾಗುವುದು, ಸಂಜೆ 4.30ಕ್ಕೆ ಬನಶಂಕರಿಯ ಚಿತ್ತಾಗಾರದಲ್ಲಿ ಅಂತಿಮ ಸಂಸ್ಕಾರವನ್ನು ನಡೆಸಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ.